Asianet Suvarna News Asianet Suvarna News

Exclusive Photo: ದರ್ಶನ್‌ ಗ್ಯಾಂಗ್‌ ಎದುರು ರೇಣುಕಾಸ್ವಾಮಿ ಪ್ರಾಣಭಿಕ್ಷೆ ಬೇಡಿದ್ದ ಎರಡು ಫೋಟೋ ವೈರಲ್‌!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಗ್ಯಾಂಗ್ ನಡೆಸಿದ ಕ್ರೌರ್ಯದ ಹೊಸ ಸಾಕ್ಷ್ಯಗಳು ಬೆಳಕಿಗೆ ಬಂದಿವೆ. ಏಷ್ಯಾನೆಟ್ ಸುವರ್ಣನ್ಯೂಸ್‌ಗೆ ಲಭ್ಯವಾಗಿರುವ ಎರಡು ಚಿತ್ರಗಳು, ಡಿ ಗ್ಯಾಂಗ್ ಪಟ್ಟಣಗೆರೆ ಶೆಡ್‌ನಲ್ಲಿ ನಡೆಸಿದ ಹಲ್ಲೆಯ ಭೀಕರತೆಯನ್ನು ಬಿಚ್ಚಿಡುತ್ತವೆ.

RENUKASWAMY Exclusive Photo Darshan thoogudeepa cruelty san
Author
First Published Sep 5, 2024, 9:18 AM IST | Last Updated Sep 5, 2024, 12:07 PM IST

ಬೆಂಗಳೂರು (ಸೆ.5): ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಿಲ್ಲಿಂಗ್‌ ಸ್ಟಾರ್‌ ದರ್ಶನ್‌ ಹಾಗೂ ಅವರ ಗ್ಯಾಂಗ್ ನಡೆಸಿದ್ದ ಕ್ರೌರ್ಯದ ಕಥೆಗಳು ಮಾತ್ರವೇ ಇಲ್ಲಿಯವರೆಗೂ ಸಿಕ್ಕಿದ್ದವು. ಈಗ ಏಷ್ಯಾನೆಟ್‌ ಸುವರ್ಣನ್ಯೂಸ್‌ಗೆ ಪ್ರಕರಣದಲ್ಲಿ ಎಕ್ಸ್‌ಕ್ಲೂಸಿವ್‌ ಆದ ಎರಡು ಚಿತ್ರಗಳು ಸಿಕ್ಕಿವೆ. ಎರಡೂ ಚಿತ್ರಗಳಲ್ಲಿ ಡಿ ಗ್ಯಾಂಗ್‌ ಪಟ್ಟಣಗೆರೆ ಶೆಡ್‌ನಲ್ಲಿ ನಡೆಸಿದ ಕ್ರೌರ್ಯದ ಕಥೆಗಳನ್ನು ತಿಳಿಸಿವೆ. ಯಾವುದೇ ರೀತಿಯ ಸಹಾನುಭೂತಿಗೂ ಈ ಗ್ಯಾಂಗ್‌ ಅರ್ಹರಲ್ಲ ಎನ್ನುವುದು ಈ ಫೋಟೋಗಳನ್ನು ನೋಡಿದರೆ ಸಾಬೀತಾಗುತ್ತದೆ. ಚಾರ್ಜ್‌ಶೀಟ್‌ನಲ್ಲಿ ಒಟ್ಟು ಐದು ಫೋಟೋಗಳಿದ್ದು, ಅದರಲ್ಲಿ ಎರಡು ಫೋಟೋ ಏಷ್ಯಾನೆಟ್‌ ಸುವರ್ಣನ್ಯೂಸ್ಗೆ ಲಭ್ಯವಾಗಿದೆ. ಸಣಕಲು ದೇಹದ ರೇಣುಕಾಸ್ವಾಮಿ ಪ್ರಾಣಭಿಕ್ಷೆ ನೀಡುವಂತೆ ಬೇಡಿಕೊಂಡರೂ, ದರ್ಶನ್‌ ನೇತೃತ್ವದ ರಕ್ಕಸರ ಗ್ಯಾಂಗ್‌ ಆತನ ಮೇಲೆ ಮುಗಿಬಿದ್ದು ಹಲ್ಲೆ ಮಾಡಿರುವುದು ಇದರಲ್ಲಿ ಗೊತ್ತಾಗಿದೆ. ಒಂದೊಂದು ಫೋಟೋಗಳು ದರ್ಶನ್‌ ಗ್ಯಾಂಗ್‌ನ ಕ್ರೌರ್ಯದ ಸಾವಿರ ಕಥೆಗಳನ್ನು ತಿಳಿಸಿದೆ

ರೇಣುಕಾಸ್ವಾಮಿ ಕೊನೆ ಕ್ಷಣದ ಕೆಲ ಫೋಟೋಗಳು ಲಭ್ಯವಾಗಿದ್ದು, ಎಫ್​ಎಸ್​​ಎಲ್​ನಲ್ಲಿ ವಿನಯ್ ಫೋನ್​ನಿಂದ ರಿಟ್ರೀವ್ ಮಾಡಿದ ಫೋಟೋಗಳು ಇವಾಗಿದೆ. ಪ್ರಕರಣದ ಭೀಕರತೆಯನ್ನು ಒಂದೊಂದು ಫೋಟೋಗಳು ಬಿಚ್ಚಿಟ್ಟಿವೆ.

ಘಟನೆ ನಡೆದ ದಿನದ ಮಧ್ಯಾಹ್ನ ಸುಮಾರು 3 ಗಂಟೆ ಹೊತ್ತಿಗೆ ತೆಗೆದ ಫೋಟೋ ಇದಾಗಿದೆ. ದರ್ಶನ್ ಬರುವುದಕ್ಕೂ ಮುನ್ನ ಒಂದು ಸುತ್ತು ಈ ಗ್ಯಾಂಗ್‌ ಹಲ್ಲೆ ನಡೆಸಿತ್ತು ಎನ್ನುವುದು ಗೊತ್ತಾಗಿದೆ. ಪಟ್ಟಣಗೆರೆ ಶೆಡ್​ನ ನೆಲದ ಮೇಲೆ ಬಿದ್ದಿರುವ ರೇಣುಕಾಸ್ವಾಮಿ ಒಂದು ಫೋಟೋ ಇದಾಗಿದೆ. ನೆಲದ ಮೇಲೆ ರೇಣುಕಾಸ್ವಾಮಿ ಬಿದ್ದಿರುವ ಫೋಟೋವನ್ನು ಪಟ್ಟಣಗೆರೆ ಶೆಡ್​​ನ ನೌಕರನೊಬ್ಬ ತೆಗೆದಿದ್ದಾರೆ. ಆ ಬಳಿಕ ಶೆಡ್‌ನ ನೌಕರ ಈ ಫೋಟೋವನ್ನು ವಿನಯ್‌ನ ಮೊಬೈಲ್‌ಗೆ ಕಳಿಸಿದ್ದಾನೆ. ಅದೇ ವ್ಯಕ್ತಿಯನ್ನು ಪೊಲೀಸರು ಪ್ರತ್ಯಕ್ಷ ಸಾಕ್ಷಿ ಮಾಡಿಕೊಂಡಿದ್ದಾರೆ. ರೇಣುಕಾಸ್ವಾಮಿ ಬದುಕಿರುವಾಗಿನ ಫೋಟೊ ಇದಾಗಿದ್ದು, ಪಕ್ಕದಲ್ಲಿ ನಿಂತ ಲಾರಿ ಕೂಡ ಇದಕ್ಕೆ ಸಾಕ್ಷಿಯಾಗಿದೆ. KA 51 AF 0454 ನಂಬರಿನ ಲಾರಿ ಪ್ರಕರಣದಲ್ಲಿ ಪ್ರಮುಖ ಸಾಕ್ಷಿ ಎನಿಸಿಕೊಂಡಿದೆ.

ಕೂರಲು ಆಗ್ತಿಲ್ಲ, ನಿಲ್ಲೋಕು ಆಗ್ತಿಲ್ಲ, ಬಳ್ಳಾರಿಯಲ್ಲಿ ಬಾಸ್‌ಗೆ 'ಅದೇ..' ಬರ್ತಿಲ್ಲ: ಕೊನೆಗೂ ಸಿಕ್ತು ಸರ್ಜಿಕಲ್‌ ಚೇರ್‌!

ಇನ್ನೊಂದು ಫೋಟೋ ಮತ್ತಷ್ಟು ಕ್ರೌರ್ಯವನ್ನು ತೋರಿಸಿದೆ. ರೇಣುಕಾಸ್ವಾಮಿ ಕೊನೆಯ ಕ್ಷಣದ ಮತ್ತೊಂದು ಫೋಟೋ ಇದಾಗಿದ್ದು.  ದರ್ಶನ್ ಶೆಡ್ಡಿಗೆ ಎಂಟ್ರಿ ಕೊಟ್ಟ ನಂತರದ ರೇಣುಕಾಸ್ವಾಮಿಯ ಫೋಟೋ ಇದಾಗಿದೆ.  ಸುಮಾರು ಸಂಜೆ 5 ಗಂಟೆ ಬಳಿಕ ಮತ್ತೊಂದು ಸುತ್ತು ಹಲ್ಲೆ ನಡೆಸಲಾಗಿದೆ. ಶೆಡ್​ನಲ್ಲಿ ದರ್ಶನ್ ಗ್ಯಾಂಗ್​ನಿಂದ ರೇಣುಕಾಸ್ವಾಮಿ ಮೇಲೆ ಭೀಕರವಾಗಿ ಈ ಹಂತದಲ್ಲಿ ಹಲ್ಲೆ ಮಾಡಲಾಗಿದೆ. ಅಳುತ್ತಾ ಬೇಡಿಕೊಂಡರೂ ದರ್ಶನ್‌ ಗ್ಯಾಂಗ್‌ ಬಿಟ್ಟಿಲ್ಲ.. ಅಳುತ್ತಾ ಬೇಡಿಕೊಳ್ಳುವ ರೇಣುಕಾಸ್ವಾಮಿಯ ಫೋಟೋ ಲಭ್ಯವಾಗಿದೆ. ವಿನಯ್ ಮೊಬೈಲ್​ ರಿಟ್ರೀವ್ ಮಾಡಿದಾಗ ಈ ಫೋಟೋಗಳು ಸಿಕ್ಕಿವೆ.

ಜೈಲಲ್ಲಿ ನಟ ದರ್ಶನ್ ಸಿಗರೇಟ್ ಸೇದಬಹುದು ನಮಗೇಕಿಲ್ಲ: ಬೀಡಿ, ಸಿಗರೇಟ್‌ಗಾಗಿ ಕೈದಿಗಳ ಪ್ರತಿಭಟನೆ!

RENUKASWAMY Exclusive Photo Darshan thoogudeepa cruelty san

 

Latest Videos
Follow Us:
Download App:
  • android
  • ios