ನಿವೃತ್ತ ಪ್ರೊಫೆಸರ್‌ ಹತ್ಯೆ| ಹುಬ್ಬಳ್ಳಿಯ ಲಿಂಗರಾಜ ನಗರದಲ್ಲಿ ನಡೆದ ಘಟನೆ| ಮಾವನನ್ನ ಕೊಲೆ ಮಾಡಿದ ಅಳಿಯ| ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವಿದ್ಯಾನಗರ ಪೊಲೀಸರು|  

ಹುಬ್ಬಳ್ಳಿ(ಅ.24): ನಿವೃತ್ತ ಪ್ರೊಫೆಸರ್‌ವೊಬ್ಬರನ್ನ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಇಂದು(ಶನಿವಾರ) ಲಿಂಗರಾಜ ನಗರದಲ್ಲಿ ನಡೆದಿದೆ. ಶಂಕ್ರಪ್ಪ ಮುಶನ್ನವರ ಎಂಬುವವರೇ ಕೊಲೆಯಾದ ದುರ್ದೈವಿಯಾಗಿದ್ದಾರೆ. 

Add Asianetnews Kannada as a Preferred SourcegooglePreferred

ಕೊಲೆಯಾದ ಶಂಕ್ರಪ್ಪ ಮುಶನ್ನವರ ಅವರು ಗದಗ ನಗರದ ಕಾನೂನು ಕಾಲೇಜಿನಲ್ಲಿ ಪ್ರೊಫೆಸರ್ ಅಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಅಳಿಯನೇ ಮಾವನನ್ನ ಕೊಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. 

ಮಂಗಳೂರು; ತಲ್ವಾರ್‌ ನಿಂದ ಕೊಚ್ಚಿ ರೌಡಿ ಶೀಟರ್ ಹತ್ಯೆ

ಶಂಕ್ರಪ್ಪ ಮುಶನ್ನವರ ಇತ್ತೀಚೆಗಷ್ಟೇ ನಿವೃತ್ತಿ ಪಡೆದು ಹುಬ್ಬಳ್ಳಿಯಲ್ಲಿ ನೆಲೆಸಿದ್ದರು. ಇಂದು ಬೆಳ್ಳಂಬೆಳಿಗ್ಗೆ ಶಂಕ್ರಪ್ಪ ಅವರ ಕೊಲೆಯಾಗಿದೆ. ಘಟನಾ ಸ್ಥಳಕ್ಕೆ ವಿದ್ಯಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.