*  ಬಾಗಲಕೋಟೆ ಜಿಲ್ಲೆಯ ಬನಹಟ್ಟಿಯಲ್ಲಿ ನಡೆದ ಘಟನೆ*  ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾದ ಮಹಾದೇವ *  ಈ ಸಂಬಂಧ ಬನಹಟ್ಟಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು 

ರಬಕವಿ-ಬನಹಟ್ಟಿ(ಆ.30): ಕೋವಿಡ್‌ನಿಂದಾಗಿ ಶಾಲೆಗಳ ಬಾಗಿಲು ತೆರೆಯದ ಕಾರಣ, ಕಳೆದೆರಡು ವರ್ಷದಿಂದ ವೇತನ ಬಾರದೆ ಕುಟುಂಬ ನಿರ್ವಹಣೆ ಕಷ್ಟಕರವಾಗಿ ಖಾಸಗಿ ಶಾಲೆ ಶಿಕ್ಷಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬನಹಟ್ಟಿಯ ಸೋಮವಾರಪೇಟೆಯಲ್ಲಿ ಶನಿವಾರ ನಡೆದಿದೆ. 

Add Asianetnews Kannada as a Preferred SourcegooglePreferred

ಮಹಾದೇವ ಜಯವಂತ ಬಿಳ್ಳೂರ(38) ಸಾವಿಗೆ ಶರಣಾದ ಶಿಕ್ಷಕ. ಅವರಿಗೆ ಸೂಕ್ತವಾಗಿ ಸಂಬಳ ಲಭಿಸುತ್ತಿರಲಿಲ್ಲ. ಜತೆಗೆ ಪಿತ್ತಕೋಶದ ಶಸ್ತ್ರಚಿಕಿತ್ಸೆಗಾಗಿ 1 ಲಕ್ಷಕ್ಕೂ ಅಧಿಕ ಹಣ ವ್ಯಯ ಮಾಡಿದ್ದರು ಎಂದು ತಿಳಿದು ಬಂದಿದೆ.

ವಿಜಯಪುರ: ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ರೇಪ್‌ ಕೇಸ್‌ ಆರೋಪಿ ಆತ್ಮಹತ್ಯೆ

ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಮಹಾದೇವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಪತ್ನಿ ಹೇಳಿದ್ದು, ಈ ಸಂಬಂಧ ಬನಹಟ್ಟಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.