ಸುಳ್ಳು ಜಾತಿ ಪ್ರಮಾಣಪತ್ರ ಪಡೆದು ಸರ್ಕಾರ ಮತ್ತು ನೈಜ ಪರಿಶಿಷ್ಟಜಾತಿಯ ಅಭ್ಯರ್ಥಿಗೆ ಮೋಸ ಮಾಡಿದ ಕುರಿತಂತೆ ಶಿಗ್ಗಾಂವಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ತನಿಖಾಧಿಕಾರಿ ದಾವಣಗೆರೆ ಡಿಸಿಆರ್‌ಒ ಪೊಲೀಸ್‌ ಇನ್‌ಸ್ಪೆಕ್ಟರ್‌ ಟಿ.ಜಿ. ಶ್ರೀಧರ ಶಾಸ್ತ್ರಿ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಹಾವೇರಿ(ಆ.20): ಪರಿಶಿಷ್ಟಜಾತಿ ಪ್ರಮಾಣಪತ್ರ ಪಡೆಯಲು ಸುಳ್ಳು ದಾಖಲಾತಿ ಸೃಷ್ಟಿಸಿ ಗ್ರಾಪಂ ಸದಸ್ಯೆಯಾಗಿ, ಅಧ್ಯಕ್ಷೆಯೂ ಆಗಿದ್ದ ಶಿಗ್ಗಾಂವಿ ತಾಲೂಕು ವನಹಳ್ಳಿ ಗ್ರಾಮದ ಲಕ್ಷ್ಮಿ ಮಾರುತಿ ಕಬ್ಬೇರ ಎಂಬವರಿಗೆ 7 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 19 ಸಾವಿರ ದಂಡ ವಿಧಿಸಿ ಹಾವೇರಿಯ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಿ.ಎಲ್‌. ಲಕ್ಷ್ಮೇ ನಾರಾಯಣ ತೀರ್ಪು ನೀಡಿದ್ದಾರೆ.

Add Asianetnews Kannada as a Preferred SourcegooglePreferred

ಶಿಗ್ಗಾಂವಿ ತಾಲೂಕು ವನಹಳ್ಳಿ ಗ್ರಾಮದ ಆರೋಪಿ ಲಕ್ಷ್ಮಿ ಕಬ್ಬೇರ ಹಿಂದೂ ಗಂಗಾಮತ (ಪ್ರ ವರ್ಗ-01)ಕ್ಕೆ ಸೇರಿದ್ದರೂ ಸುಳ್ಳು ವ್ಯಾಸಂಗ ಪ್ರಮಾಣಪತ್ರ ಹಾಗೂ ಸುಳ್ಳು ಘೋಷಣಾ ಪತ್ರ ಹಾಗೂ ಇತರ ದಾಖಲಾತಿಗಳನ್ನು ಸೃಷ್ಟಿಸಿ 2015ರ ಜೂ. 4ರಂದು ಶಿಗ್ಗಾಂವಿ ತಹಸೀಲ್ದಾರ್‌ ಕಚೇರಿಗೆ ಸಲ್ಲಿಸಿ, ಹಿಂದೂ ಗಂಟಿಚೋರ್ಸ್‌ ಪರಿಶಿಷ್ಟಜಾತಿಯ ಪ್ರಮಾಣಪತ್ರ ಪಡೆದು ಹನುಮರಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ಪರಿಶಿಷ್ಟಜಾತಿ ಮಹಿಳೆಗೆ ಮೀಸಲಿದ್ದ ಸ್ಥಾನಕ್ಕೆ ಸ್ಪರ್ಧಿಸಿ ಆಯ್ಕೆಯಾಗಿ, ಆನಂತರ ಎಸ್‌ಸಿ ಸ್ಥಾನಕ್ಕೆ ಮೀಸಲಾಗಿದ್ದ ಗ್ರಾಪಂ ಅಧ್ಯಕ್ಷರಾಗಿಯೂ ಆಯ್ಕೆಯಾಗಿದ್ದರು.

ಬೆಂಗಳೂರಲ್ಲಿ ಪೋಕ್ಸೋ ಆರೋಪಿ ನೇಣು ಬಿಗಿದುಕೊಂಡು ಆತ್ಮಹತ್ಯೆ: ಸ್ವಗ್ರಾಮಕ್ಕೆ ಮೃತದೇಹ!

ಸುಳ್ಳು ಜಾತಿ ಪ್ರಮಾಣಪತ್ರ ಪಡೆದು ಸರ್ಕಾರ ಮತ್ತು ನೈಜ ಪರಿಶಿಷ್ಟಜಾತಿಯ ಅಭ್ಯರ್ಥಿಗೆ ಮೋಸ ಮಾಡಿದ ಕುರಿತಂತೆ ಶಿಗ್ಗಾಂವಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ತನಿಖಾಧಿಕಾರಿ ದಾವಣಗೆರೆ ಡಿಸಿಆರ್‌ಒ ಪೊಲೀಸ್‌ ಇನ್‌ಸ್ಪೆಕ್ಟರ್‌ ಟಿ.ಜಿ. ಶ್ರೀಧರ ಶಾಸ್ತ್ರಿ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಆರೋಪಿ ಮೇಲಿನ ಆಪಾದನೆಗಳು ರುಜುವಾತಾದ ಹಿನ್ನೆಲೆಯಲ್ಲಿ ಶಿಕ್ಷೆ ಹಾಗೂ ದಂಡ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಸರ್ಕಾರಿ ಅಭಿಯೋಜಕಿ ಸರೋಜಾ ಕೂಲಗಿಮಠ ವಾದ ಮಂಡಿಸಿದ್ದಾರೆ.