ಬೆಳಗಾವಿಯಲ್ಲಿ ಭೀಕರ ಅಪಘಾತ: 6 ಕೂಲಿ ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ
ಸವದತ್ತಿ-ಧಾರವಾಡ ರಸ್ತೆಯಲ್ಲಿ ಮಹಿಂದ್ರ ಬೊಲೆರೊ ಹಾಗೂ ಟಾಟಾ ಏಸ್ ವಾಹನ ಮುಖಾಮುಖಿ ಡಿಕ್ಕಿಯಾಗಿದ್ದು, 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಳಗಾವಿ, (ಅ.02): ಬೊಲೆರೋ ಟಾಟಾ ಏಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬೆಳಗಾವಿ ಮತ್ತು ಧಾರವಾಡ ಹೆದ್ದಾರಿಯಲ್ಲಿ ಸಂಭವಿಸಿದೆ.
ಧಾರವಾಡದ ಮೊರಬ ಗ್ರಾಮಕ್ಕೆ ಕೂಲಿಗಾಗಿ ತೆರಳಿದ್ದ ಕೂಲಿ ಕಾರ್ಮಿಕರು ಮರಳುತ್ತಿದ್ದಾಗ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಮಹಿಳೆಯರು ಸೇರಿದಂತೆ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಗಾಂಧಿ,ಶಾಸ್ತ್ರಿ ಸ್ಮರಿಸಿದ ಭಾರತ, ಬಾಬ್ರಿ ಧ್ವಂಸದ ಹಿಂದಿತ್ತಾ ಪಾಕ್ ತಂತ್ರ? ಅ.2ರ ಟಾಪ್ 10 ಸುದ್ದಿ!
ಬೆಳಗಾವಿ- ಧಾರವಾಡ ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಗೊಂಡವರನ್ನು ಚಿಂಚನೂರು ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ.
ಎರಡೂ ವಾಹನಗಳು ಜಖಂಗೊಂಡಿವೆ. ಟಾಟಾ ಏಸ್ನಲ್ಲಿದ್ದವರೆಲ್ಲ ಕೂಲಿ ಕಾರ್ಮಿಕರಾಗಿದ್ದು, ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದಾಗ ಅಪಘಾತ ಸಂಭವಿಸಿದೆ.
ಈ ಬಗ್ಗೆ ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಎಸ್.ಪಿ. ಅಮರನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.