Thirthahalli BBA student death: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಪ್ರಾಪ್ತಿ (21) ಎಂಬ ಬಿಬಿಎ ವಿದ್ಯಾರ್ಥಿನಿ ನೇಣುಬಿಗಿದು ಆತ್ಮ೧ಹತ್ಯೆ ಮಾಡಿಕೊಂಡಿದ್ದಾಳೆ. ಆಕೆಯ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ, ಮಾಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಶಿವಮೊಗ್ಗ, (ನ. 14): ಪದವಿ ವಿದ್ಯಾರ್ಥಿನಿಯೋರ್ವಳು ಮನೆ ಬಳಿ ಮರಣಕ್ಕೆ ನೇಣುಬಿಗಿದು ಆತ್ಮ೧ಹತ್ಯೆ ಮಾಡಿಕೊಂಡ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಸಮೀಪದ ದಬ್ಬಣಗದ್ದೆ ಸಮೀಪದ ಬಚ್ಚನಕೋಡಿಗೆಯಲ್ಲಿ ನಡೆದಿದೆ.

Add Asianetnews Kannada as a Preferred SourcegooglePreferred

ಪ್ರಾಪ್ತಿ (21), ಮೃತ ದುರ್ದೈವಿ. ರಮೇಶ್ ಆಚಾರ ಎಂಬುವವರ ಪುತ್ರಿಯಾಗಿರುವ ಮೃತ ವಿದ್ಯಾರ್ಥಿನಿ. ಇಂದು ಬೆಳಗಿನ ಜಾವ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಾಪ್ತಿ ಪತ್ತೆಯಾಗಿದ್ದಾಳೆ.

ಬಿಬಿಎ ಓದುತ್ತಿದ್ದ ಪ್ರಾಪ್ತಿ:

ಬಾಳೆಬೈಲಿನ ಪದವಿ ಕಾಲೇಜಿನಲ್ಲಿ ತೃತೀಯ ವರ್ಷದ ಬಿಬಿಎ ಪದವಿ ಓದುತ್ತಿದ್ದ ಪ್ರಾಪ್ತಿ, ಬೆಳಗ್ಗೆ ಜಾವ ನೇಣುಬಿಗಿದ ಸ್ಥಿತಿಯಲ್ಲಿರುವುದು ಕಂಡು ಪೋಷಕರು ಆಘಾತಕ್ಕೊಳಗಾಗಿದ್ದಾರೆ. ಶೈಕ್ಷಣಿಕ ಒತ್ತಡದಿಂದ ನೇಣುಬಿಗಿದುಕೊಂಡಳಾ, ಇನ್ನೇನಾದರೂ ತೊಂದರೆಯಲ್ಲಿದ್ದಳಾ, ಪ್ರಾಪ್ತಿಯ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸ್ಥಳಕ್ಕೆ ಮಾಳೂರು ಪೊಲೀಸರು ಭೇಟಿ:

ಮಾಳೂರು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಬಳಿಕ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಪ್ರಾಪ್ತಿಯ ಕುಟುಂಬಸ್ಥರು, ಸ್ನೇಹಿತರು, ಕಾಲೇಜು ಸಿಬ್ಬಂದಿಯಿಂದ ಮಾಹಿತಿ ಸಂಗ್ರಹಿಸಿ ಪ್ರಾಪ್ತಿ ಸಾವಿಗೆ ಕಾರಣ ಏನು ಎಂಬ ಬಗ್ಗೆ ಎಲ್ಲ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸಲಿದ್ದಾರೆ.