Asianet Suvarna News Asianet Suvarna News

ಕಲಬುರಗಿ: ತಂದೆಗೆ ಚಾಕುವಿನಿಂದ ತಿವಿದ ಮಗ

ಆಳಂದ ಚೆಕ್‌ಪೋಸ್ಟ್‌ ಹತ್ತಿರದ ಶಿವಲಿಂಗೇಶ್ವರ ಕಾಲೋನಿಯ ದಿಲೀಪ್‌ ರಾಠೋಡ್‌ ಎಂಬುವವರಿಗೆ ಅವರ ಹಿರಿಯ ಮಗ ಸುರೇಶ ರಾಠೋಡ ಚಾಕುವಿನಿಂದ ಕೈಗೆ ತಿವಿದು ಪರಾರಿಯಾಗಿದ್ದಾನೆ. 

Son Attempted to Murder His Father in Kalaburagi grg
Author
First Published Jul 19, 2023, 11:00 PM IST | Last Updated Jul 19, 2023, 11:00 PM IST

ಕಲಬುರಗಿ(ಜು.19): ಹಣ ನೀಡುವಂತೆ ತಂದೆಗೆ ಪೀಡಿಸಿದ ಮಗನೊಬ್ಬ ಹಣ ನೀಡದೇ ಇದ್ದಾಗ ತಂದೆಗೆ ಚಾಕುವಿನಿಂದ ಕೈಗೆ ತಿವಿದು ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ. 

ನಗರದ ಆಳಂದ ಚೆಕ್‌ಪೋಸ್ಟ್‌ ಹತ್ತಿರದ ಶಿವಲಿಂಗೇಶ್ವರ ಕಾಲೋನಿಯ ದಿಲೀಪ್‌ ರಾಠೋಡ್‌ ಎಂಬುವವರಿಗೆ ಅವರ ಹಿರಿಯ ಮಗ ಸುರೇಶ ರಾಠೋಡ ಚಾಕುವಿನಿಂದ ಕೈಗೆ ತಿವಿದು ಪರಾರಿಯಾಗಿದ್ದಾನೆ. 

ಕಲಬುರಗಿ: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಜೀವ ಬೆದರಿಕೆ

ತರಕಾರಿ ವ್ಯಾಪಾರಿಯಾಗಿರುವ ದಿಲೀಪ್‌ ರಾಠೋಡ್‌ ಅವರ ಹಿರಿಯ ಮಗ ಸುರೇಶ ರಾಠೋಡ್‌ 15 ಸಾವಿರ ರುಪಾಯಿ ನೀಡುವಂತೆ ಪೀಡಿಸಿದ್ದಾನೆ. ಆಗ ಅವರು ಹಣ ನೀಡಲು ನಿರಾಕರಿಸಿದಾಗ ಕುಪಿತನಾದ ಸುರೇಶ ಚಾಕುವಿನಿಂದ ಕೈಗೆ ತಿವಿದು ಪರಾರಿಯಾಗಿದ್ದಾನೆ. 

ಈ ಸಂಬಂಧ ಸುರೇಶ ರಾಠೋಡ್‌ ಮತ್ತು ಇದಕ್ಕೆ ಪ್ರಚೋದನೆ ನೀಡಿದ ರವಿ ರಾಠೋಡ್‌ ವಿರುದ್ಧ ದಿಲೀಪ್‌ ರಾಠೋಡ್‌ ಅವರು ಚೌಕ್‌ ಪೊಲೀಸ್‌ ಠಾಣೆಯಲ್ಲಿ ದೂರು ಸಲ್ಲಿಸಿದ್ದು, ತನಿಖೆ ನಡೆದಿದೆ.

Latest Videos
Follow Us:
Download App:
  • android
  • ios