ಕೊರೋನಾ ಹಿನ್ನೆಲೆಯಲ್ಲಿ ಕಳೆದ 8 ತಿಂಗಳುಗಳ ಬಳಿಕ ಶಾಲಾ-ಕಾಲೇಜುಗಳು ಪ್ರಾರಂಭವಾಗಿವೆ. ಆದ್ರೆ, ಶಾಲೆ ಪ್ರಾರಂವಾದ ದಿನವೇ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.

ತುಮಕೂರು, (ಜ.01): ಪ್ರಸಕ್ತ ಸಾಲಿನ ಶಾಲಾ-ಕಾಲೇಜು ಆರಂಭದ ದಿನವೇ ವಿದ್ಯಾರ್ಥಿಯೊಬ್ಬ ದುರ್ಮರಣಕ್ಕೀಡಾದ ಘಟನೆ ತಿಪಟೂರು ತಾಲೂಕಿನ ಹೆಡಗರಹಳ್ಳಿ ಸಂಭವಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೃತ ವಿದ್ಯಾರ್ಥಿಯು ಚನ್ನರಾಯಪಟ್ಟಣ ತಾಲೂಕಿನ ಚೀಚಗೊಂಡನಹಳ್ಳಿ ಗ್ರಾಮದವ. ಕೊರೋನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಕಳೆದ ಮಾರ್ಚ್​ನಲ್ಲಿ ಮುಚ್ಚಿದ್ದ ಶಾಲಾ-ಕಾಲೇಜುಗಳು ಇಂದಿನಿಂದ ಅಂದರೆ ಹೊಸ ವರ್ಷ(2021)ದ ಮೊದಲ ದಿನವಾದ ಶುಕ್ರವಾರ ಪುನಾರಂಭಗೊಂಡಿದೆ.

ಶಾಲಾ-ಕಾಲೇಜುಗಳು ಆರಂಭ: ವಿದ್ಯಾರ್ಥಿಗಳಿಗೆ ವಿಶೇಷ ಸ್ವಾಗತ ಕೋರಿದ ಶಿಕ್ಷಕರು

ಈ ಹಿನ್ನೆಲೆಯಲ್ಲಿ ತಿಪಟೂರಿನ ಸಿದ್ದರಾಮೇಶ್ವರ ಕಾಲೇಜಿನ ಡಿಪ್ಲೊಮಾ ವಿದ್ಯಾರ್ಥಿ ಶಶಾಂಕ್ (20) ಕಾಲೇಜಿಗೆ ಬರುತ್ತಿದ್ದ. ಮಾರ್ಗಮಧ್ಯೆ ಟ್ಯಾಂಕರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಶಶಾಂಕ್​ ಮೃತಪಟ್ಟಿದ್ದಾನೆ.