ವಿದ್ಯಾರ್ಥಿ ಸಾವಿಗೆ ನಿಖರ ಕಾರಣ ಗೊತ್ತಾಗಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಳಿಕ ಹೇಗೆ ಮೃತಪಟ್ಟಿದ್ದಾನೆ ಎಂಬುದು ಗೊತ್ತಾಗಲಿದೆ. ಮೃತ ವಿದ್ಯಾರ್ಥಿ ಪೋಷಕರು ನೀಡಿದ ದೂರು ಆಧರಿಸಿ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಪೊಲೀಸರು.  

ಬೆಂಗಳೂರು(ಜು.27):  ಖಾಸಗಿ ಕಾಲೇಜಿನ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿಯೊಬ್ಬ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಲಿಂಗರಾಜಪುರ ಸಮೀಪ ನಡೆದಿದ್ದು, ಈ ಘಟನೆ ಸಂಬಂಧ ಹೆಣ್ಣೂರು ಠಾಣೆಯಲ್ಲಿ ಕೊಲೆ ಆರೋಪದಡಿ ಪ್ರಕರಣ ದಾಖಲಾಗಿದೆ. ರಾಮಸ್ವಾಮಿಪಾಳ್ಯ ನಿವಾಸಿ ಮಾರ್ವೇಶ್‌ (19) ಮೃತ ದುರ್ದೈವಿ. ಈ ಸಂಬಂಧ ರೌಡಿ ಕಾರ್ತಿಕ್‌ ಹಾಗೂ ಆತನ ಸಹಚರರು ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪ್ರೇಮದ ಸಂಬಂಧ ಮಂಗಳವಾರ ಕಾಲೇಜಿನಿಂದ ಮಾರ್ವೇಶ್‌ನನ್ನು ಬಲವಂತವಾಗಿ ಕಾರ್ತಿಕ್‌ ಹಾಗೂ ಆತನ ಸಹಚರರು ಹೊರಗೆ ಕರೆದೊಯ್ದಿದ್ದರು. ಬಳಿಕ ಲಿಂಗರಾಜಪುರದ ಐಓಸಿ ಬಳಿ ಆತನನ್ನು ಕಾರ್ತಿಕ್‌ ತಂಡ ಬಿಟ್ಟು ಕಳುಹಿಸಿತು. ಆ ವೇಳೆ ವಾಂತಿ ಮಾಡಿಕೊಂಡು ತೀವ್ರವಾಗಿ ಅಸ್ವಸ್ಥನಾಗಿದ್ದ ಮಾರ್ವೇಶ್‌ನನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಆತನ ಸ್ನೇಹಿತರು ಕರೆದೊಯ್ದಿದ್ದರು. ಆದರೆ ವೈದ್ಯರು ವಿದ್ಯಾರ್ಥಿ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಗನ ಬರ್ತ್‌ಡೇ ಸಂಭ್ರಮದಲ್ಲಿದ್ದ ಮನೆಯನ್ನು ಸೂತಕದ ಮನೆ ಮಾಡಿದ್ರಾ ಕಾಂಗ್ರೆಸ್ ಕಾರ್ಯಕರ್ತರು..?

ತ್ರಿಕೋನ ಪ್ರೇಮ ವಿವಾದ

ತನ್ನ ಪೋಷಕರ ಜತೆ ನೆಲೆಸಿದ್ದ ಮಾರ್ವೇಶ್‌, ಬಾಣಸವಾಡಿ ಸಮೀಪದ ಖಾಸಗಿ ಕಾಲೇಜಿನಲ್ಲಿ ಬಿಕಾಂ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ. ಕಾಲೇಜಿನ ವಿದ್ಯಾರ್ಥಿನಿಯೊಬ್ಬಳನ್ನು ಮಾರ್ವೇಶ್‌ ಸ್ನೇಹಿತ ಪ್ರೀತಿಸುತ್ತಿದ್ದು, ಇದೇ ವಿಚಾರವಾಗಿ ಮತ್ತೊಂದು ವಿದ್ಯಾರ್ಥಿ ಗುಂಪಿನ ಜತೆ ಆತನಿಗೆ ಮನಸ್ತಾಪವಾಗಿತ್ತು. ಎಂದಿನಂತೆ ಮಂಗಳವಾರ ಸಹ ಕಾಲೇಜಿಗೆ ಮಾರ್ವೇಶ್‌ ತೆರಳಿದ್ದ. ಆಗ ಗೆಳೆಯನ ಪ್ರೀತಿಗೆ ಸಹಕರಿಸುತ್ತಿದ್ದಾನೆ ಎಂದು ಶಂಕಿಸಿ ಕಾಲೇಜೆನಿಂದ ಮಾರ್ವೇಶ್‌ನನ್ನು ರೌಡಿ ಕಾರ್ತಿಕ್‌ ಹಾಗೂ ಆತನ ಸಹಚರರು ಕರೆದೊಯ್ದಿದ್ದರು. ಆದರೆ ಆತನ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಮೃತದೇಹದ ಮೇಲೆ ಗಾಯದ ಗುರುತುಗಳು ಪತ್ತೆಯಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ವಿದ್ಯಾರ್ಥಿ ಸಾವಿಗೆ ನಿಖರ ಕಾರಣ ಗೊತ್ತಾಗಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಳಿಕ ಹೇಗೆ ಮೃತಪಟ್ಟಿದ್ದಾನೆ ಎಂಬುದು ಗೊತ್ತಾಗಲಿದೆ. ಮೃತ ವಿದ್ಯಾರ್ಥಿ ಪೋಷಕರು ನೀಡಿದ ದೂರು ಆಧರಿಸಿ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.