ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಯೋಧ| ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಣ್ಣೂರು ಗ್ರಾಮದ ಮೃತ ಪರಸಪ್ಪ ಚಿಲಕನಹಳ್ಳಿ| ಮದ್ರಾಸ್ ರೆಜಿಮೆಂಟ್ 27 ನೇ ಬಟಾಲಿಯನ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ| ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು‌ ಬಂದಿಲ್ಲ| 

ವಿಜಯಪುರ(ಮಾ.07): ಕರ್ತವ್ಯ ನಿರತ ಯೋಧನೋರ್ವ ನೇಣಿಗೆ ಶರಣಾದ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು(ಭಾನುವಾರ) ನಡೆದಿದೆ. ಪರಸಪ್ಪ ಚಿಲಕನಹಳ್ಳಿ (25) ನೇಣಿಗೆ ಶರಣಾದ ಯೋಧರಾಗಿದ್ದಾರೆ. 

Add Asianetnews Kannada as a Preferred SourcegooglePreferred

ಪರಸಪ್ಪ ಚಿಲಕನಹಳ್ಳಿ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಣ್ಣೂರು ಗ್ರಾಮದವರಾಗಿದ್ದಾರೆ. ದೆಹಲಿಯ ನಿವಾಸದಲ್ಲಿ ಪರಸಪ್ಪ ಚಿಲಕನಹಳ್ಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. 

ರೈಲಿಗೆ ತಲೆಕೊಟ್ಟು ಬಿ-ಟೆಕ್‌ ಪದವೀಧರ ಆತ್ಮಹತ್ಯೆ

ಪರಸಪ್ಪ ಚಿಲಕನಹಳ್ಳಿ ಮದ್ರಾಸ್ ರೆಜಿಮೆಂಟ್ 27 ನೇ ಬಟಾಲಿಯನ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಪರಸಪ್ಪ ಚಿಲಕನಹಳ್ಳಿ ಅವರು ತಮ್ಮ ಪತ್ನಿಯೊಂದಿಗೆ ದೆಹಲಿಯಲ್ಲಿ ವಾಸವಾಗಿದ್ದರು ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು‌ ಬಂದಿಲ್ಲ.