ಹೊಳೆಹೊನ್ನೂರು ಸಮೀಪದ ಕೂಡ್ಲಿ ಗ್ರಾಮದ ಪಾರ್ವತಿ ಬ್ರಹ್ಮೇಶ್ವರ ದೇವಸ್ಥಾನದ ಅರ್ಚಕರಿಗೆ ನೀಡಲಾಗಿದ್ದ ಸರ್ಕಾರಿ ಚೆಕ್ ಬೌನ್ಸ್ ಆಗಿದೆ. ₹35,600 ಮೌಲ್ಯದ ಚೆಕ್‌ನಲ್ಲಿ ಹಣವಿಲ್ಲದ ಕಾರಣ ಅರ್ಚಕರು ಜೀವನ ನಿರ್ವಹಣೆ ಕಷ್ಟಕರ ಎಂದು ಅಳಲು ತೋಡಿಕೊಂಡಿದ್ದಾರೆ. 

ಹೊಳೆಹೊನ್ನೂರು (ಆ.2): ದೇವಸ್ಥಾನದ ಅರ್ಚಕರಿಗೆ ನೀಡಿದ್ದ ಸರ್ಕಾರಿ ಚೆಕ್, ಅಮಾನ್ಯ (ಬೌನ್ಸ್) ಆಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪಟ್ಟಣ ಸಮೀಪದ ಶ್ರೀಕ್ಷೇತ್ರ ಕೂಡ್ಲಿ ಗ್ರಾಮದಲ್ಲಿರುವ ಮುಜರಾಯಿ ಇಲಾಖೆಗೆ ಒಳಪಟ್ಟ ಪಾರ್ವತಿ ಬ್ರಹ್ಮೇಶ್ವರದ ದೇಗುಲದ ಅರ್ಚಕ ಕೆ.ಆರ್.ಆನಂದ್ ಅವರ ಮೂರು ತಿಂಗಳ ವೇತನ ಹಾಗೂ ಇತರೆ ನಿರ್ವಹಣೆ ವೆಚ್ಚ ಸೇರಿ ಒಟ್ಟು ₹35,600 ಮೌಲ್ಯದ ಚೆಕ್‌ ಅನ್ನು ಜು.1ರ ದಿನಾಂಕ ನಮೂದಿಸಿ ಶಿವಮೊಗ್ಗ ತಹಸೀಲ್ದಾರ್ ಸೀಲು ಸಹಿ ಮಾಡಿ ಕೊಟ್ಟಿದ್ದರು.

ಇದನ್ನೂ ಓದಿ: ಬೆಳಗಾವಿ: ರೋಗಿಯನ್ನು ಆಸ್ಪತ್ರೆಗೆ ಸೇರಿಸಲು8 ಕಿ.ಮೀ. ಚಟ್ಟದ ಮೇಲೆ ಹೊತೊಯ್ದರು!

ಇತ್ತೀಚೆಗೆ ನಗದೀಕರಣಕ್ಕೆ ಚೆಕ್‌ ಅನ್ನು ಕೂಡ್ಲಿ ಕರ್ನಾಟಕ ಬ್ಯಾಂಕಿಗೆ ನೀಡಲಾಗಿತ್ತು. ಆದರೆ ಚೆಕ್ ನೀಡಲಾಗಿದ್ದ ಖಾತೆಯಲ್ಲಿ ಸಾಕಷ್ಟು ಹಣ ಇಲ್ಲದೆ ಇರುವುದರಿಂದ ಅಮಾನ್ಯಗೊಂಡಿದೆ ಎಂದು ಬ್ಯಾಂಕಿನಿಂದ ಹಿಂಬರಹ ನೀಡಿ ಚೆಕ್ ವಾಪಾಸ್ಸು ನೀಡಿದ್ದಾರೆ.

ಇದನ್ನೂ ಓದಿ: ಪ್ರಿಯಕರನ ಜತೆ ಸೇರಿ ಪತಿಯನ್ನ ಕೊಂದು ಪಂಚಮಿ ಹಬ್ಬ ಮಾಡಿದ್ದ ಪತ್ನಿ! ಗಂಡ ಧರ್ಮಸ್ಥಳಕ್ಕೆ ಹೋಗಿದ್ದಾನೆಂದು ಕತೆ ಕಟ್ಟಿದ್ದ ಐನಾತಿ ಸಿಕ್ಕಿಬಿದ್ದಿದ್ದು ಹೇಗೆ?

ಜೀವನ ನಿರ್ವಹಣೆ ಮಾಡುವುದು ಹಾಗೂ ಕರ್ತವ್ಯ ನಿರ್ವಹಿಸುವುದು ಕಷ್ಟಕರ ಆಗಿದ್ದು, ಮುಂದಿನ ದಿನಗಳಲ್ಲಿ ಇದು ಸರಿಯಾಗದೆ ಇದ್ದಲ್ಲಿ ಕರ್ತವ್ಯದಿಂದ ಮುಕ್ತಿ ಪಡೆಯುವುದಾಗಿ ಅರ್ಚಕ ಕೆ.ಆರ್.ಆನಂದ್ ಬೇಸರ ವ್ಯಕ್ತಪಡಿಸಿದ್ದಾರೆ.