Asianet Suvarna News Asianet Suvarna News

ಕಳ್ಳರಿಗೆ ವರದಾನವಾದ ಬೆಂಗ್ಳೂರು ಮಳೆ: ಪಾರ್ಕ್‌ನಲ್ಲಿದ್ದ ಶ್ರೀಗಂಧದ ಮರಗಳನ್ನ ರಾತ್ರೋ ರಾತ್ರಿ ಕದ್ದ ಖದೀಮರು!

ಯಲಹಂಕ ನ್ಯಾಯಾಂಗ ಲೇಔಟ್ ನಾ ಬಿಬಿಎಂಪಿ ಪಾರ್ಕ್ ನಲ್ಲಿ ನಿನ್ನೆ ರಾತ್ರಿ ಶ್ರೀಗಂಧದ ಮರಗಳ ಕಳ್ಳತನವಾಗಿದೆ. ಮಳೆಯ ನಡುವೆಯೇ ಶ್ರೀಗಂಧದ ಮರಗಳನ್ನ ಕತ್ತರಿಸಿ ಸಾಗಿಸಿದ್ದಾರೆ ಖದೀಮರು. ಬೆಳಗ್ಗೆ ವಾಕಿಂಗ್ ಹೋದ ವೇಳೆ ಮರ ಕಳ್ಳತನವಾಗಿರುವ ಬಗ್ಗೆ ಸಾರ್ವಜನಿಕರು ಗಮನಿಸಿದ್ದಾರೆ. 
 

Thieves stole sandalwood trees in the BBMP Park during Rain in Bengaluru grg
Author
First Published Oct 16, 2024, 4:20 PM IST | Last Updated Oct 16, 2024, 4:20 PM IST

ಬೆಂಗಳೂರು(ಅ.16): ನಗರದಲ್ಲಿ ಸತತವಾಗಿ ಮಳೆಯಾಗುತ್ತಿರುವ  ವೇಳೆ ಬಿಬಿಎಂಪಿ ಪಾರ್ಕ್‌ನಲ್ಲಿರುವ ಶ್ರೀಗಂಧದ ಮರಗಳನ್ನ ಕಳ್ಳರು ಎಗರಿಸಿದ ಘಟನೆ ನಿನ್ನೆ(ಮಂಗಳವಾರ) ನಡೆದಿದೆ. ಸತತ ಮಳೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಮನೆ ಸೇರಿದ ನಂತರ ಬಿಬಿಎಂಪಿ ಪಾರ್ಕ್ ನಲ್ಲಿ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ. 

ಯಲಹಂಕ ನ್ಯಾಯಾಂಗ ಲೇಔಟ್ ನಾ ಬಿಬಿಎಂಪಿ ಪಾರ್ಕ್ ನಲ್ಲಿ ನಿನ್ನೆ ರಾತ್ರಿ ಶ್ರೀಗಂಧದ ಮರಗಳ ಕಳ್ಳತನವಾಗಿದೆ. ಮಳೆಯ ನಡುವೆಯೇ ಶ್ರೀಗಂಧದ ಮರಗಳನ್ನ ಕತ್ತರಿಸಿ ಸಾಗಿಸಿದ್ದಾರೆ ಖದೀಮರು. ಬೆಳಗ್ಗೆ ವಾಕಿಂಗ್ ಹೋದ ವೇಳೆ ಮರ ಕಳ್ಳತನವಾಗಿರುವ ಬಗ್ಗೆ ಸಾರ್ವಜನಿಕರು ಗಮನಿಸಿದ್ದಾರೆ. 

ಮನೆ ಮುಂದಿನ ಕುರಿ, ಮೇಕೆಗಳನ್ನ ಕದ್ದು ಮಾರಾಟ ಮಾಡುತ್ತಿದ್ದ 'ಸಿಂಧನೂರು ಗ್ಯಾಂಗ್' ಅರೆಸ್ಟ್!

ಸ್ಥಳಕ್ಕೆ ಭೇಟಿ ನೀಡಿದ ಬಿಬಿಎಂಪಿ ಅಧಿಕಾರಿಗಳು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  ಸ್ಥಳಕ್ಕೆ ಭೇಟಿ ನೀಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.  ಸ್ಥಳದಲ್ಲಿ ಉಳಿದ ಶ್ರೀಗಂಧದ ತುಂಡುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

Latest Videos
Follow Us:
Download App:
  • android
  • ios