ಕಳವು ಮಾಡುತ್ತಿದ್ದ ದೃಶ್ಯಾವಳಿಗಳು ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿತ್ತು. ಸಿಸಿ ಕ್ಯಾಮೆರಾದಲ್ಲಿ ದ್ವಿಚಕ್ರ ವಾಹನದ ಸಂಖ್ಯೆ ಹಾಗೂ ಕಳ್ಳತನ ಮಾಡಿದ ವ್ಯಕ್ತಿಗಳ ಚಹರೆ ಸ್ವಷ್ಟವಾಗಿ ಗೋಚರಿಸುತ್ತಿತ್ತು. ಈ ಜಾಡನ್ನು ಹಿಡಿದು ಹೊರಟ ಪೊಲೀಸರು ಅಂತಿಮವಾಗಿ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಕೆಜಿಎಫ್‌(ಜು.23): ನಗರದಲ್ಲಿ ಬ್ಯಾಂಕ್‌ಗಳ ಬಳಿ ಹೊಂಚು ಹಾಕಿ ಹಣವನ್ನು ಕಳವು ಮಾಡುತ್ತಿದ್ದ ಮೂವರು ಅಂತರ ರಾಜ್ಯ ಕಳ್ಳರನ್ನು ಬಂಧಿಸಿ ಎರಡು ದ್ವಿಚಕ್ರ ವಾಹನ ಹಾಗೂ 4 ಲಕ್ಷ ರೂ ನಗದನ್ನು ವಶಪಡಿಸಿಕೊಳ್ಳುವಲ್ಲಿ ರಾಬರ್ಟ್‌ಸನ್‌ಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. 

Add Asianetnews Kannada as a Preferred SourcegooglePreferred

ಬಂಧಿತರನ್ನು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಜಕ್ರಯ್ಯ(43), ರಮೇಶ್‌(50), ನಲ್ಲೂರು ಜಿಲ್ಲೆಯ ಆಕಲಕುಮಾರ್‌(32) ಎಂದು ಗುರ್ತಿಸಲಾಗಿದ್ದು, ಆರೋಪಿಗಳು ಬ್ಯಾಂಕ್‌ಗಳ ಬಳಿ ಅಮಾಯಕ ಜನರನ್ನು ವಂಚಿಸಿ ಕಳುವು ಮಾಡುತ್ತಿದ್ದರು ಎನ್ನಲಾಗಿದೆ. 

ದಾವಣಗೆರೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಮಾರಾಟಗಾರ ಫಯಾಜ್‌ವುಲ್ಲಾ ವಶಕ್ಕೆ; ಉಗ್ರರರೊಂದಿಗೆ ನಂಟು?

ಇವರು ಕಳವು ಮಾಡುತ್ತಿದ್ದ ದೃಶ್ಯಾವಳಿಗಳು ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿತ್ತು. ಸಿಸಿ ಕ್ಯಾಮೆರಾದಲ್ಲಿ ದ್ವಿಚಕ್ರ ವಾಹನದ ಸಂಖ್ಯೆ ಹಾಗೂ ಕಳ್ಳತನ ಮಾಡಿದ ವ್ಯಕ್ತಿಗಳ ಚಹರೆ ಸ್ವಷ್ಟವಾಗಿ ಗೋಚರಿಸುತ್ತಿತ್ತು. ಈ ಜಾಡನ್ನು ಹಿಡಿದು ಹೊರಟ ಪೊಲೀಸರು ಅಂತಿಮವಾಗಿ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಮತ್ತೊಂದು ಪ್ರಕರಣದಲ್ಲಿ ತಾಲೂಕಿನ ಚಿನ್ನಾಗನಹಳ್ಳಿ ಬಳಿ ಗಾಂಜಾ ಮಾರುತ್ತಿದ್ದ ಆಂಧ್ರದ ವ್ಯಕ್ತಿಯನ್ನು ಆಂಡರ್‌ಸನ್‌ಪೇಟೆ ಪೊಲೀಸರು ಬಂಧಿಸಿ, 130 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.