ಕಳೆದ 3-5 ವರ್ಷಗಳಲ್ಲಿ ಬಾಂಗ್ಲಾದೇಶದಿಂದ ಸುಮಾರು 25,000 ಮಂದಿ ಅಕ್ರಮವಾಗಿ ಭಾರತ ಪ್ರವೇಶಿಸಿದ್ದಾರೆ ಎಂದು ಉಡುಪಿಯಲ್ಲಿ ಬಂಧಿತರಾದವರು ತಿಳಿಸಿದ್ದರು. ಪೊಲೀಸರ ಪ್ರಕಾರ ಕರ್ನಾಟಕದಲ್ಲಿರುವ ಒಟ್ಟು ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ ಒಂದು ಲಕ್ಷ ಮೀರಬಹುದು.

ಹಾಸನ(ಅ.23): ಉಡುಪಿ, ಶಿವಮೊಗ್ಗ ಬಳಿಕ ಇದೀಗ ನಕಲಿ ಆಧಾರ್‌ಕಾರ್ಡ್ ಬಳಸಿ ನಗರದಲ್ಲಿ ವಾಸವಿದ್ದ ಮೂವರು ಬಾಂಗ್ಲಾ ಪ್ರಜೆಗಳನ್ನು ಜಿಲ್ಲಾ ಅಪರಾಧ ಪತ್ತೆ ದಳ ವಿಭಾಗದ ಪೊಲೀಸರು ಬಂಧಿಸಿದ್ದಾರೆ. 

Add Asianetnews Kannada as a Preferred SourcegooglePreferred

ಜಮಾಲ್ ಅಲಿ, ಫಾರೂಕ್ ಅಲಿ, ಅಕ್ಟಲ್ ಅಕ್ಕು ಬಂಧಿತರು. ಇವರು ಹಾಸನ ನಗರದ 80 ಅಡಿ ರಸ್ತೆಯ, ಗದ್ದೆಹಳ್ಳದ ನಾಲ್ಕನೇ ಅಡ್ಡ ರಸ್ತೆಯ ಜುಬೇರ್‌ಎಂಬುವವರಮನೆಯಲ್ಲಿ ವಾಸವಿದ್ದರು. ಜುಬೇರ್‌ನಿರ್ಮಿಸುತ್ತಿರುವ ಕಟ್ಟಡದಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. 

ಹಾಸನ: ಮಲಗಿದ ವೇಳೆ ಕಚ್ಚಿದ ನಾಗರ ಹಾವು, ಆಟೋ ಚಾಲಕನ ಸಾವು

ಪಶ್ಚಿಮ ಬಂಗಾಳದಲ್ಲಿ ನಕಲಿ ಆಧಾರ್ ಕಾರ್ಡ್ ಪಡೆದಿದ್ದ ಈ ಮೂವರು ಬಾಂಗ್ಲಾದಿಂದ ಅಕ್ರಮವಾಗಿ ನುಸುಳಿ ಬಂದಿದ್ದರು. ಇವರ ಬಳಿ ಇರುವ ಆಧಾರ್ ಕಾರ್ಡ್‌ಗಳು ನಕಲಿ ಎನ್ನುವುದು ಖಾತ್ರಿಯಾದ ನಂತರ ಮೂವರನ್ನೂ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪೆನ್ನನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಕಳೆದ 3-5 ವರ್ಷಗಳಲ್ಲಿ ಬಾಂಗ್ಲಾದೇಶದಿಂದ ಸುಮಾರು 25,000 ಮಂದಿ ಅಕ್ರಮವಾಗಿ ಭಾರತ ಪ್ರವೇಶಿಸಿದ್ದಾರೆ ಎಂದು ಉಡುಪಿಯಲ್ಲಿ ಬಂಧಿತರಾದವರು ತಿಳಿಸಿದ್ದರು. ಪೊಲೀಸರ ಪ್ರಕಾರ ಕರ್ನಾಟಕದಲ್ಲಿರುವ ಒಟ್ಟು ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ ಒಂದು ಲಕ್ಷ ಮೀರಬಹುದು.