ತಾಯಿ ತನ್ನ ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ಮತ್ತಿಕೈ ಗ್ರಾಮ ವ್ಯಾಪ್ತಿಯ ಚಂಪಕಾಪುರದಲ್ಲಿ ನಡೆದಿದೆ.

ಹೊಸನಗರ(ಆ.10): ತಾಯಿ ತನ್ನ ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಗುರುವಾರ ರಾತ್ರಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ಮತ್ತಿಕೈ ಗ್ರಾಮ ವ್ಯಾಪ್ತಿಯ ಚಂಪಕಾಪುರದಲ್ಲಿ ನಡೆದಿದೆ.

Add Asianetnews Kannada as a Preferred SourcegooglePreferred

ಚಂದಾಕಾಪುರದ ವಾಣಿ (32), ಮಕ್ಕಳಾದ ಸಮರ್ಥ (12), ಸಂಪದ (6) ಮೃತ ದುರ್ದೈವಿಗಳು. ಗುರುವಾರ ರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದೆ. 

ರಾಣಿಬೆನ್ನೂರು: ಒಂದೇ ಗ್ರಾಮದ ಇಬ್ಬರು ರೈತರು ಆತ್ಮಹತ್ಯೆಗೆ ಶರಣು

ಬಾವಿಯಿಂದ ಮೃತದೇಹವನ್ನು ಮೇಲೆತ್ತಿ ಶವಗಳ ಮರಣೋತ್ತರ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.