ಭದ್ರಾ ನದಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಮೂವರು ಪ್ರವಾಸಿಗರು ದುರ್ಮರಣಕ್ಕೀಡಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್‌ಆರ್ ಪುರ ತಾಲೂಕಿನ ಬೈರಾಪುರ ಗ್ರಾಮದಲ್ಲಿ ನಡೆದಿದೆ. ಆದೀಲ್, ಸಾಜೀದ್ ಹಾಗೂ ಅಫ್ದಾಖಾನ್ ಮೃತ ದುರ್ದೈವಿಗಳು.

ಚಿಕ್ಕಮಗಳೂರು (ಜೂ.19):ಭದ್ರಾ ನದಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಮೂವರು ಪ್ರವಾಸಿಗರು ದುರ್ಮರಣಕ್ಕೀಡಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್‌ಆರ್ ಪುರ ತಾಲೂಕಿನ ಬೈರಾಪುರ ಗ್ರಾಮದಲ್ಲಿ ನಡೆದಿದೆ.

Add Asianetnews Kannada as a Preferred SourcegooglePreferred

ಆದೀಲ್, ಸಾಜೀದ್ ಹಾಗೂ ಅಫ್ದಾಖಾನ್ ಮೃತ ದುರ್ದೈವಿಗಳು. ಮೂವರು ಶಿವಮೊಗ್ಗ ಜಿಲ್ಲೆಯ ವಿದ್ಯಾನಗರ ಮೂಲದವರು ಎನ್ನಲಾಗಿದೆ. ಬಕ್ರೀದ್ ಹಬ್ಬದ ಬಳಿಕ ಮೋಜು ಮಸ್ತಿಗೆ ಭದ್ರಾ ನದಿಯ ಬ್ಯಾಕ್ ವಾಟರ್‌ನಲ್ಲಿ ತೆಪ್ಪದಲ್ಲಿ ಹೋಗಿದ್ದ ಮೂವರು ಯುವಕರು. ಈ ವೇಳೆ ನಡುನೀರಿನಲ್ಲಿ ತೆಪ್ಪ ಮುಳುಗಿದೆ. ಯಾವುದೇ ಜೀವ ಸುರಕ್ಷಾ ಉಪಕರಣಗಳಿಲ್ಲದ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಯುವಕರು.

ಸ್ಕೂಟಿ-ಪಿಕಪ್ ವಾಹನ ನಡುವೆ ಭೀಕರ ಅಪಘಾತ; ಮಹಿಳೆ ದುರ್ಮರಣ!

ಘಟನೆ ಬಳಿಕ ವನ್ಯಜೀವಿ, ಪೊಲೀಸ್‌ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಸ್ಥಳದಲ್ಲಿ ಮೂವರ ಶವಕ್ಕಾಗಿ ಶೋಧಕಾರ್ಯ ನಡೆಸಿದ್ದಾರೆ.ಎನ್.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.