ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ, ಪತಿಯ ಕಿರುಕುಳದಿಂದ ಬೇಸತ್ತ ಸರಿತಾ ಎಂಬ ಗೃಹಿಣಿ ತನ್ನಿಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು ಆತ್ಮ೧ಹತ್ಯೆ ಮಾಡಿಕೊಂಡಿದ್ದಾರೆ. ಆರು ವರ್ಷಗಳಿಂದ ಗಂಡ ಮತ್ತು ಅತ್ತೆಯಿಂದ ನಿರಂತರ ಕಿರುಕುಳವೇ ಸಾವಿಗೆ ಕಾರಣವೆಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ.

ತಿಪಟೂರು (ಸೆ.20): ಪತಿಯ ಕಿರುಕುಳಕ್ಕೆ ಬೇಸತ್ತು ಗೃಹಿಣಿಯೋರ್ವಳು ತನ್ನಿಬ್ಬರು ಮಕ್ಕಳ ಜೊತೆ ನೇಣುಬಿಗಿದುಕೊಂಡು ಜೀವ ಬಿಟ್ಟ ದಾರುಣ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಕಡಪನಕೆರೆ ಗ್ರಾಮದಲ್ಲಿ ನಡೆದಿದೆ. ತಾಯಿ ಸರಿತಾ (25), ನಾಲ್ಕು ವರ್ಷದ ಗಂಡು ಮಗು ಹಾಗೂ ಎರಡು ವರ್ಷದ ಹೆಣ್ಣು ಮೃತ ದುರ್ದೈವಿಗಳು.

Add Asianetnews Kannada as a Preferred SourcegooglePreferred

6 ವರ್ಷಗಳ ಹಿಂದೆ ಅದೇ ಗ್ರಾಮದ ಆಟೋ ಚಾಲಕನಾಗಿದ್ದ ಸಂತೋಷ್ ಎಂಬಾತನನ್ನ ಸರಿತಾ ಮದುವೆಯಾಗಿದ್ದಳು. ಮದುವೆಯಾದಗಿಂದಲೂ ಮೃತಳಿಗೆ ಗಂಡ ಸಂತೋಷ್ ಹಾಗೂ ಸಂತೋಷ್ ತಾಯಿ ದಿನನಿತ್ಯ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಫುಡ್ ಡೆಲಿವರಿ ಬಾಯ್‌ ಮೇಲೆ ಮಾರಣಾಂತಿಕ ಹಲ್ಲೆ: ಇಬ್ಬರು ಆರೋಪಿಗಳ ಬಂಧನ

ಮಗಳ ಸಾವಿಗೆ ಗಂಡ, ಅತ್ತೆಯ ಕಿರುಕುಳವೇ ಕಾರಣ:

ಸರಿತಾಳ ಸಾವಿಗೆ ಆಕೆಯ ಗಂಡ ಸಂತೋಷ್ ಹಾಗೂ ತಾಯಿ ಕಾರಣ ಎಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ. ಕಳೆದ ಆರು ವರ್ಷಗಳಿಂದಲೂ ಕಿರುಕುಳದಿಂದ ಮನನೊಂದಿದ್ದ ಸರಿತಾ, ಇಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮ೧ಹತ್ಯೆ ಮಾಡಿಕೊಂಡಿದ್ದಾಳೆ. ತಾನು ಸತ್ತರೆ ಮಕ್ಕಳು ತಬ್ಬಲಿಗಳಾಗುತ್ತವೆ ಎಂಬ ಕಾರಣಕ್ಕೆ ತನ್ನಿಬ್ಬರ ಮಕ್ಕಳೊಂದಿಗೆ ಆತ್ಮ೧ಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪ್ರಕರಣ ಸಂಬಂಧ ಪ್ರಕರಣ ದಾಖಲಾಗಿದ್ದು ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.