ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಕರ್ಜಗಿ ಗ್ರಾಮದ ದಸ್ತಗೀರ ಜಾಫರಸಾಬ ಚಂದನ ಮತ್ತು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸಾಲೋಟಗಿ ಗ್ರಾಮದ ಹಾಜಿಮಲಂಗ ಮೈಬೂಬಸಾಬ ವಾಲಿಕಾರಗೆ ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶ ಹೊರಡಿಸಿದ ನ್ಯಾಯಾಧೀಶರಾದ ಶಿವಾಜಿ ಅನಂತ ನಾಲವಾಡೆ 

ಕಲಬುರಗಿ(ಜು.07): ಶ್ರೀಗಂಧದ ಮರ ಕಳ್ಳತನ ಮಾಡಿದ ಇಬ್ಬರು ಆರೋಪಿಗಳಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ಮತ್ತು ತಲಾ 1 ಲಕ್ಷ ರು. ದಂಡ ವಿಧಿಸಿ ಆದೇಶ ಹೊರಡಿಸಿದೆ.

Add Asianetnews Kannada as a Preferred SourcegooglePreferred

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಕರ್ಜಗಿ ಗ್ರಾಮದ ದಸ್ತಗೀರ ಜಾಫರಸಾಬ ಚಂದನ ಮತ್ತು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸಾಲೋಟಗಿ ಗ್ರಾಮದ ಹಾಜಿಮಲಂಗ ಮೈಬೂಬಸಾಬ ವಾಲಿಕಾರಗೆ ಶಿಕ್ಷೆ ಮತ್ತು ದಂಡ ವಿಧಿಸಿ ನ್ಯಾಯಾಧೀಶರಾದ ಶಿವಾಜಿ ಅನಂತ ನಾಲವಾಡೆ ಅವರು ಆದೇಶ ಹೊರಡಿಸಿದ್ದಾರೆ.

ಪ್ರೇಯಸಿಯ ಕಥೆ ಮುಗಿಸಿ ದೇಶ ಸುತ್ತಿದ ಕಿಲ್ಲರ್ ಪ್ರೇಮಿ: ಹೈದರಾಬಾದ್‌ ಟೆಕ್ಕಿಯನ್ನ ಡೆಲ್ಲಿ ಬಾಯ್ ಹೇಗೆಲ್ಲಾ ಕಾಡಿಬಿಟ್ಟ..?

ಘಟನೆಯ ಹಿನ್ನೆಲೆ:

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಗುಡ್ಡಹಳ್ಳಿ- ವಿಭೂತಿಹಳ್ಳಿ ಮಧ್ಯೆ 2019ರ ಅಕ್ಟೋಬರ್‌ 21ರಂದು ರಾತ್ರಿ 11.45ರ ಸುಮಾರಿಗೆ ಇಬ್ಬರೂ ಆರೋಪಿಗಳು ಶ್ರೀಗಂಧದ ಮರದ ತುಂಡುಗಳನ್ನು ಸಾಗಿಸುವಾಗ ಅಂದಿನ ಆಲಮೇಲ ಪಿಎಸೈ ನಿಂಗಪ್ಪ ಪೂಜಾರಿ ಅವರು ದಾಳಿ ನಡೆಸಿ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದರು. ಆಗ ಆರೋಪಿಗಳು ನಾಗರಹಳ್ಳಿ ಗ್ರಾಮದ ಮಲ್ಲಣ್ಣ ಸಿದ್ದಣ್ಣ ಬಾಗೇವಾಡಿ ಅವರ ಜಮೀನಿನ ಬಳಿ ಸರಕಾರಿ ಹಳ್ಳದಲ್ಲಿ ಬೆಳೆದ ಶ್ರೀಗಂಧದ ಮರವನ್ನು ಕಡಿದು 11 ತುಂಡುಗಳನ್ನಾಗಿ ಮಾಡಿ ಪ್ಲಾಸ್ಟಿಕ್‌ ಚೀಲದಲ್ಲಿ ಹಾಕಿಕೊಂಡು ಮಾರಾಟ ಮಾಡಲು ತೆಗೆದುಕೊಂಡು ಹೋಗುತ್ತಿರುವುದಾಗಿ ಮಾಹಿತಿ ನೀಡಿದ್ದರು. ಆಗ ಪೆಲೀಸರು ಬೈಕ್‌ ಮತ್ತು ಶ್ರೀಗಂಧದ ಮರಗಳನ್ನು ವಶಪಡಿಸಿಕೊಂಡಿದ್ದರು.

ನಂತರ ಈ ಪ್ರಕರಣದ ವಿಚಾರಣೆ ನಡೆಸಿದ ಆಲಮೇಲ ಪಿಎಸ್‌ಐ ಎಸ್‌.ಎಂ. ಬೆನಕನಹಳ್ಳಿ ಆರೋಪ ಪಟ್ಟಿಸಲ್ಲಿಸಿದ್ದರು. ಈ ಕುರಿತು ಕೂಲಂಕಷ ವಿಚಾರಣೆ ನಡೆಸಿದ ನ್ಯಾಯಾಧೀಶರು ಕರ್ನಾಟಕ ಅರಣ್ಯ ಕಾಯ್ದೆಯಡಿ ಐದು ವರ್ಷ ಜೈಲು ಶಿಕ್ಷೆ ಮತ್ತು ತಲಾ ರು. 1 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ ಎಂದು ಪ್ರಧಾನ ಸರಕಾರಿ ಅಭಿಯೋಜಕ ಎಸ್‌.ಎಚ್‌. ಹಕೀಂ ತಿಳಿಸಿದ್ದಾರೆ.