ತಮ್ಮ ಪ್ರೇಮಕ್ಕೆ ಕುಟುಂಬದವರು ಅಡ್ಡಿಯಾಗಿರುವುದರಿಂದ ಬೇಸತ್ತು ಆತ್ಮಹತ್ಯೆಗೆ ಪ್ರೇಮಿಗಳು ನಿರ್ಧರಿಸಿದ್ದಾರೆ. ಮೊದಲು ತನ್ನ ಮನೆಯಲ್ಲಿ ಜಾನ್ಸನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನ್ನ ಪ್ರಿಯತಮೆ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿಯುತ್ತಿದ್ದಂತೆ ದಿಲ್ಶಾದ್ ಸಹ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಬೆಂಗಳೂರು(ಜ.12): ತಮ್ಮ ಪ್ರೇಮಕ್ಕೆ ಕುಟುಂಬ ಸದಸ್ಯರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಬೇಸತ್ತು ವಿವಾಹಿತೆ ಹಾಗೂ ಆಕೆಯ ಪ್ರಿಯಕರ ಪ್ರತ್ಯೇಕವಾಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ಶನಿವಾರ ನಡೆದಿದೆ. ಸಂಪಿಗೆಹಳ್ಳಿ ಸಮೀಪದ ಶ್ರೀರಾಮಪುರದ ದಿಲ್ಶಾದ್ (24) ಹಾಗೂ ಹಣಿ ಸಂದ್ರದ ಜಾನ್ಸನ್ (26) ಮೃತರು. ಮನೆಯಲ್ಲಿ ಬೆಳಗ್ಗೆ ಜಾನ್ಸನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಸಂಗತಿ ತಿಳಿದು ಬೇಸರಗೊಂಡ ದಿಲ್ಶಾದ್, ಕೆಲ ಕ್ಷಣಗಳಲ್ಲಿ ತಾನು ಕೂಡ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

'ನನ್ನ ಹತ್ರ ಹಣ ಕೇಳಿದ್ರೆ ಕೊಟ್ಟುಬಿಡ್ತಿದ್ದೆ..' 13 ವರ್ಷದ ಮಗನನ್ನು ಕಳೆದುಕೊಂಡು ಶಕುಂತಲಾ ಕಣ್ಣೀರು!

ಕಳೆದ 6 ವರ್ಷಗಳ ಹಿಂದೆ ವಿಜಯಪುರ ಜಿಲ್ಲೆಯ ಕೃಷ್ಣ ಹಾಗೂ ದಿಲ್ಶಾದ್ ಪ್ರೀತಿಸಿ ವಿವಾಹವಾಗಿದ್ದು, ಈ ದಂಪತಿಗೆ 5 ಹಾಗೂ 2 ವರ್ಷ ವಯಸ್ಸಿನ ಇಬ್ಬರು ಮಕ್ಕಳಿದ್ದರು. ಬಳಿಕ ಕೆಲಸ ಅರಸಿಕೊಂಡು ನಗರಕ್ಕೆ ಬಂದು ಸಂಪಿಗೆಹಳ್ಳಿಯ ಶ್ರೀರಾಮಪುರದಲ್ಲಿ ವಾಸವಾಗಿದ್ದ ದಂಪತಿ, ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಆದರೆ ಕೃಷ್ಣ ಜತೆ ಮದುವೆಗೂ ಮುನ್ನ ಜಾನ್ಸನ್ ಮೇಲೆ ದಿಲ್ಶಾದ್‌ಗೆ ಮನಸ್ಸಾಗಿತ್ತು. ಈ ಹಿಂದು-ಮುಸ್ಲಿಂ- ಕ್ರಿಶ್ಚಿಯನ್ ತ್ರಿಕೋನ ಪ್ರೇಮ ಮದುವೆ ನಂತರವೂ ಮುಂದುವರೆದಿದೆ. ಕೊನೆಗೆ ಕೃಷ್ಣನಿಗೆ ಗೊತ್ತಾಗಿ ಪತ್ನಿಗೆ ಆತ ಬುದ್ದಿಮಾತು ಹೇಳಿದ್ದ. ಆದರೆ ಜಾನ್ಸನ್ ಜತೆ ಆಕೆಯ ಸಂಪರ್ಕ ಕಡಿತವಾಗಿರಲಿಲ್ಲ. ಇದೇ ವಿಷಯವಾಗಿ ದಿಲ್ಶಾದ್ ದಂಪತಿ ಮಧ್ಯೆ ಜಗಳವಾಗುತ್ತಿದ್ದವು. 

ಹಲವು ಬಾರಿ ಜಾನ್ಸನ್‌ಗೆ ಸಹ ಆಕೆಯ ಪತಿ ಎಚ್ಚರಿಕೆ ಸಹ ಕೊಟ್ಟಿದರು. ಹೀಗಿದರೂ ಜೋಡಿಗಳ ಪ್ರೇಮದಾಟ ಮುಂದುವರೆದಿತ್ತು. ಈ ಪ್ರೇಮದ ಸಂಗತಿ ತಿಳಿದು ಜಾನ್ಸನ್‌ಗೆ ಆತನ ಕುಟುಂಬದವರು ಕೂಡ ಬುದ್ದಿ ಹೇಳಿದ್ದರು. ಇದರಿಂದ ಮನನೊಂದ ಯುವಕ ಮತ್ತು ಮಹಿಳೆ ಸಾವಿಗೆ ಶರಣಾಗಿದ್ದಾರೆ. ಈ ಘಟನೆ ಸಂಬಂಧ ಸಂಪಿಗೆಹಳ್ಳಿ ಹಾಗೂ ಹೆಣ್ಣೂರು ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿವೆ.

ತುಮಕೂರು: ಮೈಕ್ರೋಫೈನಾನ್ಸ್‌ ಕಾಟ ತಾಳಲಾರದೆ ಮಹಿಳೆ ಆತ್ಮಹತ್ಯೆ

ಪ್ರಿಯತಮನ ಸಾವು ಬೆನ್ನಲ್ಲೇ ದಿಲ್ಶಾದ್ ನೇಣಿಗೆ 

ತಮ್ಮ ಪ್ರೇಮಕ್ಕೆ ಕುಟುಂಬದವರು ಅಡ್ಡಿಯಾಗಿರುವುದರಿಂದ ಬೇಸತ್ತು ಆತ್ಮಹತ್ಯೆಗೆ ಪ್ರೇಮಿಗಳು ನಿರ್ಧರಿಸಿದ್ದಾರೆ. ಮೊದಲು ತನ್ನ ಮನೆಯಲ್ಲಿ ಜಾನ್ಸನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನ್ನ ಪ್ರಿಯತಮೆ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿಯುತ್ತಿದ್ದಂತೆ ದಿಲ್ಶಾದ್ ಸಹ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

# ಕೃಷ್ಣನನ್ನು ಪ್ರೀತಿಸಿ ಮದುವೆ ಆಗಿದ್ದ ದಿಲ್ಶಾದ್ ದಂಪತಿಗೆ 5 ಹಾಗೂ 2 ವರ್ಷದ ಇಬ್ಬರು ಮಕ್ಕಳು 
# ಇತ್ತ ಜಾನ್ಸನ್ ಜತೆಗೆ ಪ್ರೇಮಾಂಕುರ ಮುಂದುವರೆಸಿದ್ದ ದಿಲ್ಶಾದ್ 
# ಮದುವೆ ಬಳಿಕವೂ ನಿಲ್ಲದ ಜಾನ್ಸನ್ - ದಿಲ್ಶಾದ್ ಲವ್, ಮನೆಯವರಿಗೆ ಹೆದರಿ ನೇಣು ಬಿಗಿದುಕೊಂಡ ಜಾನ್ಸನ್ 
# ಪ್ರಿಯತಮ ಜಾನ್ಸನ್ ಆತ್ಮಹತ್ಯೆ ಬೆನ್ನಲ್ಲೇ ದಿಲ್ಶಾದ್ ಆತ್ಮಹತ್ಯೆ. ಸಂಪಿಗೆ ಹಳ್ಳಿ ಹಾಗೂ ಹೆಣ್ಣೂರು ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲು