* ದಾವಣಗೆರೆ ನಗರದ ಆಂಜನೇಯ ಕಾಟನ್ ಮಿಲ್ ಬಳಿ ನಡೆದ ಘಟನೆ* ಮೃತ ಸಹೋದರಿಯರು ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲೂಕಿನ ಬೆನಕನಹಳ್ಳಿಯ ಗ್ರಾಮದವರು *  ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು 

ದಾವಣಗೆರೆ(ಜು.30): ಸಹೋದರಿಯರಿಬ್ಬರ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾದ ಘಟನೆ ನಗರದ ಹೊರವಲಯದ ಆಂಜನೇಯ ಕಾಟನ್ ಮಿಲ್ ಬಳಿ ಇಂದು(ಶುಕ್ರವಾರ) ನಡೆದಿದೆ. ಗೌರಮ್ಮ (34) ಹಾಗೂ ರಾಧಮ್ಮ (32) ಸಾವನ್ನಪ್ಪಿರುವ ಸಹೋದರಿಯರಾಗಿದ್ದಾರೆ.

Add Asianetnews Kannada as a Preferred SourcegooglePreferred

ಕೊಳೆತ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿದ್ದು, ಕೆಟ್ಟ ವಾಸನೆ ಬಂದ ಹಿನ್ನೆಲೆಯಲ್ಲಿ ಘಟನೆ ನಡೆದು ಮೂರರಿಂದ ನಾಲ್ಕು ದಿನಗಳಾಗಿರಬಹುದು ಎಂದು ಅಂದಾಜಿಸಲಾಗಿದೆ. ಯಾರೋ ದುಷ್ಕರ್ಮಿಗಳು ಇವರನ್ನ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಅಕ್ಕಪಕ್ಕದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. 

ಹರಪನಹಳ್ಳಿ RTI ಕಾರ್ಯಕರ್ತ ಶ್ರೀಧರ್ ಹತ್ಯೆ ಪ್ರಕರಣ: ಮತ್ತೆ ಮೂವರ ಬಂಧನ

ಮೃತ ಸಹೋದರಿಯರು ಮೂಲತಃ ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲೂಕಿನ ಬೆನಕನಹಳ್ಳಿಯ ಗ್ರಾಮದವರಾಗಿದ್ದಾರೆ ಎಂದು ತಿಳಿದು ಬಂದಿದೆ. ಕೆಲ ತಿಂಗಳ ಹಿಂದೆ ಆಂಜನೇಯ ಕಾಟನ್ ಮಿಲ್‌ನಲ್ಲಿ‌ ಕೆಲಸಕ್ಕೆಂದು ಇಬ್ಬರೂ ಸಹೋದರಿಯರು ಸೇರಿಕೊಂಡಿದ್ದರು ಎಂದು ತಿಳಿದು ಬಂದಿದೆ. 

ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹಗಳು ಜಿಲ್ಲಾಸ್ಪತ್ರೆ ಶವಾಗಾರಕ್ಕೆ ರವಾನೆ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ.