Asianet Suvarna News Asianet Suvarna News

ಉಡುಪಿಯ ಒಂದೇ ಕುಟುಂಬದ ನಾಲ್ವರ ಹತ್ಯೆಗೆ ಸಿಕ್ತು ರೋಚಕ ಸುಳಿವು: ಕೊಲೆಗಡುಕನ ಕ್ಲ್ಯೂ ಕೊಟ್ಟ ಆಟೋ ಡ್ರೈವರ್!

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಆರೋಪಿಯ ಬಗ್ಗೆ ಆಟೋ ಚಾಲಕನೊಬ್ಬ ಪೊಲೀಸರಿಗೆ ರೋಚಕ ಸುಳಿವು ನೀಡಿದ್ದಾನೆ.

Udupi family four members murder case Santhekatte auto driver gives Exciting clues to police sat
Author
First Published Nov 12, 2023, 6:00 PM IST

ಉಡುಪಿ (ನ.12): ರಾಜ್ಯವನ್ನೇ ಬೆಚ್ಚಿ ಬೀಳಿಸುವಂತೆ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಕೊಲೆ ಪಾತಕಿಗಾಗಿ ಪೊಲೀಸರು ಶೋಧಕಾರ್ಯ ಆರಂಭಿಸಿದ್ದು, ಈ ವೇಳೆ ಸ್ಥಳೀಯ ಆಟೋ ಡ್ರೈವರ್‌ ಪೊಲೀಸರಿಗೆ ಕೊಲೆಗಡುಕನ ಸುಳಿವನ್ನು ಬಿಟ್ಟುಕೊಟ್ಟಿದ್ದಾರೆ. ಈ ಮೂಲಕ ಕೊಲೆ ಪ್ರಕರಣಕ್ಕೆ ಪೊಲೀಸರಿಗೆ ರೋಚಕ ಸುಳಿವೊಂದು ಸಿಕ್ಕಂತಾಗಿದೆ.

ಉಡುಪಿ ಜಿಲ್ಲೆ ಮಲ್ಪೆ ಠಾಣಾ ವ್ಯಾಪ್ತಿಯ ತೃಪ್ತಿನಗರದಲ್ಲಿ ಇಂದು ಬೆಳಗ್ಗೆ (ಭಾನುವಾರ) ನಡೆದಿದೆ. ಹಸೀನಾ(46), ಅಫ್ನಾನ್(23), ಅಯ್ನಾಝ್(21) ಹಾಗೂ ಆಸಿಂ(12) ಎಂಬುವರನ್ನ ದುಷ್ಕರ್ಮಿ ಚೂರಿಯಿಂದ ಚುಚ್ಚಿ ಕೊಲೆಗೈದು ಪರಾರಿಯಾಗಿದ್ದಾನೆ. ಒಂದೇ ಘಟನೆಯಲ್ಲಿ ತಾಯಿ ಮತ್ತು ಮೂವರು ಮಕ್ಕಳನ್ನ ಕೊಲೆ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆಯ ಹಿಂದೆ ವಿವಿಧ ಆಯಾಮಗಳ ಅನುಮಾನವನ್ನು ವ್ಯಕ್ತಪಡಿಸಿ ಕೊಲೆ ಪಾತಕಿಯ ಶೋಧಕ್ಕೆ ಮುಂದಾಗಿದ್ದಾರೆ. ಜೊತೆಗೆ, ಇದು ಕುಟುಂಬದಲ್ಲಿ ವೈಷಮ್ಯದ ಹಿನ್ನೆಲೆಯಲ್ಲಿ ನಡೆದ ಕುಕೃತ್ಯ ಎಂಬುದನ್ನು ತಿಳಿಸಿದ್ದರು. ಈಗ ಆಟೋ ಚಾಲಕನೊಬ್ಬ ಕೊಲೆಗಡುಕನನ್ನು ನೋಡಿದ್ದು, ಈ ಬಗ್ಗೆ ಪೊಲೀಸರಿಗೆ ಸುಳಿವು ನೀಡಿದ್ದಾನೆ.

ಉಡುಪಿ: ಚೂರಿಯಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನ ಕೊಂದ ದುಷ್ಕರ್ಮಿಗಳು..!

ಆಟೋ ಡ್ರೈವರ್‌ ಹೇಳಿದ್ದೇನು ಇಲ್ಲಿದೆ ನೊಡಿ: ಸಂತೆಕಟ್ಟೆಯ ರಿಕ್ಷಾ ಚಾಲಕ ಶ್ಯಾಮ್ ಅವರು, ಕೊಲೆಯ ಆರೋಪಿ ನನ್ನ ಆಟೋದಲ್ಲಿ ಮನೆಗೆ ತೆರಳಿದ್ದಾನೆ. ಸಂತೆ ಕಟ್ಟೆಯಿಂದ ಈಗ ಕೊಲೆ ನಡೆದಿರುವ ಘಟನೆಯ ಮನೆಯ ವಿಳಾಸವನ್ನು ಆರೋಪಿ ಸರಿಯಾಗಿ ಹೇಳಿದ್ದನು. ನಾನು ಹೋಗುವಾಗ ದಾರಿ ತಪ್ಪಿದಾಗ ಆತನೇ ಈ ದಾರಿಯಲ್ಲ, ಪಕ್ಕದ ರಸ್ತೆಯಲ್ಲಿ ಹೋಗಬೇಕು ಎಂದು ಸೀದಾ ಮನೆಯ ಬಳಿ ಕರೆದುಕೊಂಡು ಹೋಗಿದ್ದನು. ಇನ್ನು ಆಟೋವನ್ನು ಹತ್ತಿದ ವ್ಯಕ್ತಿಗೆ ಸುಮಾರು 45 ವರ್ಷ ವಯಸ್ಸಾಗಿರಬಹುದು. ಬ್ರೌನ್‌ ಕಲರ್‌ ಅಂಗಿ ಹಾಗೂ ಮುಖಕ್ಕೆ ಬಿಳಿ ಬಣ್ಣದ ಮಾಸ್ಕ್‌ ಧರಿಸಿದ್ದನು. ಅವನು ಹೇಳಿದಂತೆ ನಾನು ಮನೆಯ ಬಳಿ ಬಿಟ್ಟು ಹೋದೆನು ಎಂದು ಹೇಳಿದ್ದಾನೆ.

ಮನೆಗೆ ಹೋಗಿ 15 ನಿಮಿಷದಲ್ಲಿ ವಾಪಸ್ ಬಂದಿದ್ದ: ಕೊಲೆಯ ಆರೋಪಿ ಎಂದು ಹೇಳಲಾಗುವ ವ್ಯಕ್ತಿಯನ್ನು ನಾನು ಮನೆಯ ಬಳಿ ಬಿಟ್ಟು 15 ನಿಮಿಷದಲ್ಲಿ ಪುನಃ ಸಂತೆಕಟ್ಟೆಯ ಸ್ಟ್ಯಾಂಡ್‌ಗೆ ಬಂದಿದ್ದನು. ಅಲ್ಲಿಂದ ತನ್ನನ್ನು ಕರೆದುಕೊಂಡು ಹೋಗುವಂತೆ ಗಡಿಬಿಡಿಯಲ್ಲಿ ರಿಕ್ಷಾ ಚಾಲಕರಿಗೆ ಕೇಳಿಕೊಂಡಿದ್ದನು. ಆಗ ಅಲ್ಲಿಂದ ಬೇರೊಂದು ಸ್ಥಳಕ್ಕೆ ತೆರಳಿದ್ದನು. ಅವನು ಬೆಂಗಳೂರು ಕನ್ನಡವನ್ನು ಮಾತನಾಡುತ್ತಿದ್ದನು. ಈತ ಮನೆಯ ಪರಿಚಿತನೇ ಇರಬೇಕು ಎಂದು ಆಟೋ ಚಾಲಕ ಶ್ಯಾಮ್‌ ಮಾಹಿತಿ ನೀಡಿದ್ದಾರೆ.

ಡೆತ್‌ನೋಟ್ ಬರೆದಿಟ್ಟು ಬ್ರಹ್ಮಕುಮಾರಿ ಆಶ್ರಮದಲ್ಲಿ ಸಾವಿಗೆ ಶರಣಾದ ಸೋದರಿಯರು

ಒಂದೇ ಕುಟುಂಬದ ನಾಲ್ವರ ಕೊಲೆಯ ಕುರಿತು ಸ್ಥಳಕ್ಕೆ ಭೇಟಿ ನೀಡಿದ ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ಮಾಧ್ಯಮಗಳೊಂದಿಗೆ ಮಾತನಾಡಿ, ಈ ಘಟನೆಯ ಬಗ್ಗೆ ಪೊಲೀಸರ ಜೊತೆ ಮಾತನಾಡಿದ್ದೇನೆ. ಕೌಟುಂಬಿಕ ವಿಚಾರ ಹಿನ್ನೆಲೆಯಲ್ಲಿ ಕೃತ್ಯ ಆಗಿರಬಹುದು ಎಂದು ಅನ್ನಿಸುತ್ತಿದೆ. ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್ ಈಗಾಗಲೇ ತಂಡವನ್ನು ರಚನೆ ಮಾಡಿದ್ದಾರೆ. ಆರೋಪಿಯನ್ನ ಪತ್ತೆಹಚ್ಚಲು ಪೊಲೀಸರು ಬೆನ್ನುಬಿದ್ದಿದ್ದಾರೆ. ಈ ಕೃತ್ಯ ಬಹಳ ಬೇಸರ ತರಿಸುವಂತದ್ದಾಗಿದೆ. ದೀಪಾವಳಿ ಈ ಸಂದರ್ಭದಲ್ಲಿ ಘಟನೆ ಎಲ್ಲರನ್ನ ದುಃಖಕ್ಕೆ ತಳ್ಳಿದೆ. ಕುಟುಂಬದ ಹಿನ್ನೆಲೆಯ ಜಗಳ ಎಂದು ಅನಿಸುತ್ತದೆ. ಮಂಗಳೂರಿನಲ್ಲಿ ಕೆಲಸಕ್ಕೆ ಇದ್ದ ಮಕ್ಕಳು ಇಲ್ಲಿಗೆ ಬಂದಿದ್ದಾರೆ. ಕುಟುಂಬದ ಬಗ್ಗೆ ಮಾಹಿತಿ ಇದ್ದೇ ಈ ಕೃತ್ಯ ಎಸಗಿರುವ ಬಗ್ಗೆ ಶಂಕೆ ಇದೆ ಎಂದು ತಿಳಿಸಿದರು.

Follow Us:
Download App:
  • android
  • ios