Sindagi Road murder incident: ವಿಜಯಪುರದ ಸಿಂದಗಿ ರಸ್ತೆಯಲ್ಲಿ ಕುಡಿದ ಮತ್ತಿನಲ್ಲಿದ್ದ ಮೂವರು ಯುವಕರ ನಡುವೆ ಜಗಳ ಉಂಟಾಗಿ, ಇಬ್ಬರು ಸೇರಿ ಒಬ್ಬನನ್ನು ಇಟ್ಟಿಗೆಯಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿದ್ದಾರೆ.  ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

ವಿಜಯಪುರ (ಅ.15): ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವನನ್ನು ಇಟ್ಟಿಗೆಯಿಂದ ಜಜ್ಜಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ವಿಜಯಪುರ ನಗರದ ಸಿಂದಗಿ ರಸ್ತೆಯಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪೊಲೀಸ್ ಪ್ರಕಾರ. ಕುಡಿದ ನಶೆಯಲ್ಲಿ ಮೂವರು ಯುವಕರ ನಡುವಿನ ಜಗಳದಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಕೊಲೆಯಾದ ಯುವಕ, ಇಬ್ಬರು ಆರೋಪಿಗಳೊಂದಿಗೆ ಸೇರಿ ಒಟ್ಟಿಗೆ ಮದ್ಯ ಸೇವಿಸಿದ್ದರು. ಕುಡಿಯಲು ಮೂವರು ಯುವಕರು ಒಟ್ಟಿಗೆ ಬಂದಿದ್ದರು. ಕುಡಿದ ಬಳಿಕ ಮೂವರ ನಡುವೆ ಏನೋ ಕಾರಣಕ್ಕೆ ಜಗಳ ಉಂಟಾಗಿದೆ. ಈ ವೇಳೆ ಇಬ್ಬರು ಯುವಕರು ಒಬ್ಬನನ್ನು ಇಟ್ಟಿಗೆಯಿಂದ ಭೀಕರವಾಗಿ ಜಜ್ಜಿ ಮಾಡಿ ಕೊಂದು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಚಿತ್ರದುರ್ಗ: ಜಾತಿ ಗಣತಿಗೆ ತೆರಳಿದ್ದ ಶಿಕ್ಷಕರಿಬ್ಬರು ಅಪಘಾತದಲ್ಲಿ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಹತ್ಯೆಗೀಡಾದ ಯುವಕನ ಶವವು ರಸ್ತೆ ಪಕ್ಕದಲ್ಲಿ ರಕ್ತದ ಮಡುವಿನಲ್ಲಿ ಕಂಡು ಬಂದಿದ್ದು, ಸ್ಥಳೀಯರು ಮಾಹಿತಿ ನೀಡಿದ ನಂತರ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕೊಲೆ ದೃಶ್ಯ ಕಂಡು ರಸ್ತೆಯಲ್ಲಿ ಜನರು ಗಾಬರಿಯಿಂದ ನೋಡಲು ಜಮಾಯಿಸಿದ್ದರು.

ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯಲ್ಲಿ ಯಾವ ಕಾರಣಕ್ಕೆ ಹತ್ಯೆಯಾಗಿದೆ, ಹತ್ಯೆ ಮಾಡಿದ ಆರೋಪಿಗಳು ಯಾರು ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ. ಕೊಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಘಟನೆಯು ಸ್ಥಳೀಯರಲ್ಲಿ ಭಯ ಮತ್ತು ಆತಂಕ ಮೂಡಿಸಿದೆ. ಮದ್ಯ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರ ಚರ್ಚೆಗೆ ಕಾರಣವಾಗಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಲು ತೀವ್ರ ತನಿಖೆ ನಡೆಸುತ್ತಿದ್ದು, ಘಟನೆಯ ಹಿನ್ನೆಲೆಯನ್ನು ಸಂಪೂರ್ಣವಾಗಿ ತಿಳಿಯಲು ಸಾಕ್ಷ್ಯ ಸಂಗ್ರಹಿಸುತ್ತಿದ್ದಾರೆ.