*  ಮನೆಯಲ್ಲಿ ಕಿತ್ತು ತಿನ್ನುವ ಬಡತನ. ನಿತ್ಯ ದುಡಿದು ತಿನ್ನಲೇಬೇಕು*  ತಪ್ಪಿಸಿಕೊಂಡು ಹೋಗಿ ಪ್ರಾಣ ಉಳಿಸಿಕೊಂಡ ಮಗ  ಅನಾರೋಗ್ಯದಿಂದ ಬಳಲುತ್ತಿದ್ದ ಮಗ*  ಈ ಸಂಬಂಧ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು   

ಗದಗ/ನರಗುಂದ(ಅ.07):  ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ಮಗಳಿಗೆ ವಿಷ ಉಣಿಸಿ, ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನರಗುಂದ(Nargund) ತಾಲೂಕಿನ ಕೊಣ್ಣೂರಿನಲ್ಲಿ ಅ. 4ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಗ್ರಾಮದ ಯಲ್ಲವ್ವ ಮಹೇಶ ಕಂಗಣ್ಣನವರ (27), ಸಪ್ನಾ (2) ಮೃತರು. ಮಗ ಸಮರ್ಥ (4) ವಿಷ ಕುಡಿಸಲು ಬಂದಾಗ ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾನೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹಲವು ವರ್ಷಗಳಿಂದ ಹೃದಯ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆಯ ಚಿಕಿತ್ಸೆಗೆ(Treatment) ಸಾಕಷ್ಟು ಹಣ ಬೇಕಾಗಿತ್ತು. ಪತಿ ಚಾಲಕ ವೃತ್ತಿ ಮಾಡಿಕೊಂಡಿದ್ದು ಬಂದ ಹಣದಲ್ಲಿ ನನಗೆ ಚಿಕಿತ್ಸೆ ಕೊಡಿಸಲು ಆಗುವುದಿಲ್ಲ. ಎದೆ ನೋವಿನಿಂದ ಬದುಕಲು ಸಾಧ್ಯವಿಲ್ಲ. ನಾನು ಸತ್ತರೆ ಮಕ್ಕಳು ಅನಾಥರಾಗುತ್ತಾರೆ ಎಂದು ಯಲ್ಲವ್ವ ಅ. 4ರಂದು ರಾತ್ರಿ 9 ಗಂಟೆಯ ವೇಳೆ ಮಗಳಿಗೆ ವಿಷ ಕುಡಿಸಿ ತಾನು ಕುಡಿದಿದ್ದಾಳೆ. ಪಕ್ಕದಲ್ಲಿಯೇ ಇದ್ದ ಮಗನಿಗೆ ಕುಡಿಸಲು ಮುಂದಾದಾಗ ಅವನು ತಪ್ಪಿಸಿಕೊಂಡು ಓಡಿ ಹೋಗಿದ್ದಾನೆ. 

20 ದಿನಗಳ ನಂತರ ಮಾಸ್ ಸುಸೈಡ್ ರಹಸ್ಯ ಬಹಿರಂಗ.. ಅಪ್ಪನ ಹತ್ಯೆಗೆ ಸ್ಕೆಚ್!

ಈ ವಿಷಯ ಜನರಿಗೆ ತಿಳಿಯುತ್ತಿದ್ದಂತೆ ಯಲ್ಲವ್ವ ಹಾಗೂ ಸಪ್ನಾ ಅವಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಯಲ್ಲವ್ವ ಅಂದೇ ಮೃತಪಟ್ಟರೆ, ಸಪ್ನಾ ಅ. 5ರಂದು ಮೃತಳಾಗಿದ್ದಾಳೆ. ನರಗುಂದ ಪೊಲೀಸ್(Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಿತ್ತು ತಿನ್ನುವ ಬಡತನ: 

ಮನೆಯಲ್ಲಿ ಕಿತ್ತು ತಿನ್ನುವ ಬಡತನ. ನಿತ್ಯ ದುಡಿದು ತಿನ್ನಲೇಬೇಕು. ಪತಿ ಮಹೇಶ ವಾಹನ ಚಾಲಕನಾಗಿದ್ದ. ಯಲ್ಲವ್ವನ ಅನಾರೋಗ್ಯದಿಂದ ಆ ಕೆಲಸವನ್ನು ಬಿಟ್ಟು ಇವಳ ಆರೈಕೆಯಲ್ಲಿ ತೊಡಗಿದ್ದ. ಆಸ್ಪತ್ರೆಗೆ ಪರೀಕ್ಷೆಗೆ ತೆರಳಿದ ವೇಳೆ ಶಸ್ತ್ರಚಿಕಿತ್ಸೆ ಮಾಡಬೇಕು. ಇದಕ್ಕೆ ಸಾಕಷ್ಟು ಹಣ ಖರ್ಚಾಗಲಿದೆ ಎಂದು ವೈದ್ಯರು ಹೇಳಿದ್ದಾರೆ. ಇದರಿಂದ ಮನನೊಂದ ಯಲ್ಲವ್ವ, ಅಷ್ಟು ಹಣ ಹೊಂದಿಸಲು ನಮ್ಮಿಂದ ಸಾಧ್ಯವಿಲ್ಲ. ಚಿಕಿತ್ಸೆ ಪಡೆಯದಿದ್ದರೆ ನಾನು ಸಾಯುತ್ತೇನೆ. ಇದರಿಂದ ನನ್ನ ಮಕ್ಕಳು ಅನಾಥವಾಗುತ್ತವೆ ಎಂದು ಅರಿತು ಪತಿ ಮನೆಯಲ್ಲಿ ಇಲ್ಲದ ವೇಳೆ ಮಗಳಿಗೆ ವಿಷ ಉಣಿಸಿ ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.