ನಿವೇಶನ ಸ್ವಚ್ಚಗೊಳಿಸುತ್ತಿದ್ದ ಜೆಸಿಬಿ ಚಾಲಕನಿಂದ ಅಚಾತುರ್ಯ ನಡೆದಿದೆ. ಖಾಲಿ ನಿವೇಶನದಲ್ಲಿ ಜಾಲಿ ಗಿಡ ಕಸ ಬೆಳೆದಿತ್ತು. ಬಡಾವಣೆ ಕೆಲ ಬಡ ಮಹಿಳೆಯರು ಇಲ್ಲಿ ಬಯಲುಶೌಚಕ್ಕೆ ಹೋಗುತ್ತಿದ್ದರು. ಶೌಚಕ್ಕೆಂದು ಮಹಿಳೆಯ ಮೇಲೆ ಜೆಸಿಬಿಯಿಂದ ಮಣ್ಣು ಸುರಿದಿದ್ದಾರೆ. ಹೀಗಾಗಿ ಉಸಿರಾಟದ ಸಮಸ್ಯೆಯಿಂದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.  

ರಾಯಚೂರು(ಆ.15): ಬಯಲು ಶೌಚಕ್ಕೆ ಹೋದ ಮಹಿಳೆಯ ಮೇಲೆ ಜೆಸಿಬಿ ಚಾಲಕ ಮಣ್ಣಿನ ರಾಶಿ ಹಾಕಿದ ಘಟನೆ ನಗರದ ಆಶಾಪುರ ರಸ್ತೆಯಲ್ಲಿನ ಜನತಾ ಕಾಲೋನಿಯಲ್ಲಿ ಇಂದು(ಗುರುವಾರ) ನಡೆದಿದೆ. ಮಣ್ಣು ಹಾಕಿದ ಕಾರಣ ಉಸಿರಾಟದ ಸಮಸ್ಯೆಯಿಂದ ಮಹಿಳೆ ಮೃತಪಟ್ಟಿದ್ದಾರೆ. ತಾಯಮ್ಮ(32) ಘಟನೆಯಲ್ಲಿ ಮೃತಪಟ್ಟ ದುರ್ದೈವಿ ಮಹಿಳೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಿವೇಶನ ಸ್ವಚ್ಚಗೊಳಿಸುತ್ತಿದ್ದ ಜೆಸಿಬಿ ಚಾಲಕನಿಂದ ಅಚಾತುರ್ಯ ನಡೆದಿದೆ. ಖಾಲಿ ನಿವೇಶನದಲ್ಲಿ ಜಾಲಿ ಗಿಡ ಕಸ ಬೆಳೆದಿತ್ತು. ಬಡಾವಣೆ ಕೆಲ ಬಡ ಮಹಿಳೆಯರು ಇಲ್ಲಿ ಬಯಲುಶೌಚಕ್ಕೆ ಹೋಗುತ್ತಿದ್ದರು. ಶೌಚಕ್ಕೆಂದು ಮಹಿಳೆಯ ಮೇಲೆ ಜೆಸಿಬಿಯಿಂದ ಮಣ್ಣು ಸುರಿದಿದ್ದಾರೆ. ಹೀಗಾಗಿ ಉಸಿರಾಟದ ಸಮಸ್ಯೆಯಿಂದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಿಂದ ಮೂರು ಮಕ್ಕಳು ತಬ್ಬಲಿಗಳಾಗಿವೆ. 

ರಾಮನಗರ: ಪ್ರೀತಿಗೆ ಪೋಷಕರ ವಿರೋಧ, ಯುವಕ ನೇಣಿಗೆ ಶರಣು, ಚಾಕು ಇರಿದುಕೊಂಡ ಯುವತಿ

ಜೆಸಿಬಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮರಣೋತ್ತರ ಪರೀಕ್ಷಗಾಗಿ ರಿಮ್ಸ್ ಆಸ್ಪತ್ರೆಗೆ ಶವ ರವಾನೆ ಮಾಡಲಾಗಿದೆ. ಪಶ್ಚಿಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.