ಮಹಿಳೆಯ ಕೊಲೆ| ಬಳ್ಳಾರಿ ಜಿಲ್ಲೆಯ ಹೊಸಪೇಟೆ ನಗರದ ಬಿಎಸ್‌ಎನ್‌ಎಲ್‌ ಟಾವ​ರ್‌ ಪ್ರದೇಶದಲ್ಲಿ ನಡೆದ ಘಟನೆ| ಈ ಸಂಬಂಧ  ಚಿತ್ತವಾಡ್ಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು| 

ಹೊಸಪೇಟೆ(ಸೆ.20): ನಗರದ ವಿಜಯನಗರ ಕಾಲೇಜು ಬಳಿಯ ಬಿಎಸ್‌ಎನ್‌ಎಲ್‌ ಟಾವ​ರ್‌ ಪ್ರದೇಶದಲ್ಲಿ ಮಹಿಳೆಯ ಕೊಲೆ ಮಾಡಲಾಗಿದೆ ಎಂದು ನಗರದ ಚಿತ್ತವಾಡ್ಗಿ ಪೊಲೀಸ್‌ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.

Add Asianetnews Kannada as a Preferred SourcegooglePreferred

ಮುಬೀನಾ ಬಾನು (32) ಮೃತ ಮಹಿಳೆ. 2016ರಲ್ಲಿ ನಗರದ ಆಸೀಫ್‌ ಎಂಬುವರೊಂದಿಗೆ ಮುಬೀನಾ ಬಾನು ಮದುವೆಯಾಗಿತ್ತು. ನಾಲ್ಕು ವರ್ಷದ ಹೆಣ್ಣು ಮಗುವಿದೆ. 

ಬಿಜೆಪಿ ಮುಖಂಡನ ಕೊಲೆ ಪ್ರಕರಣ: ಪತ್ನಿ ಸೇರಿ ಹಲವರ ವಿಚಾರಣೆ

ಕಳೆದೆರಡು ದಿನಗಳ ಹಿಂದೆ ಅಸ್ವಾಭಾವಿಕವಾಗಿ ಮೃತಪಟ್ಟಿದ್ದರು. ಮಹಿಳೆ ಸಾವು ಸಹಜ ಅಲ್ಲ, ಕೊಲೆ ಎಂದು ಆರೋಪಿಸಿ ಮುಬಿನಾ ತಾಯಿ ಸಾಜೀದಾ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಕ್ರಮ ಕೈಗೊಂಡಿದ್ದಾರೆ.