Asianet Suvarna News Asianet Suvarna News

Mysuru: ಪ್ರೀತಿಸುವಂತೆ ಪೀಡಿಸುತ್ತಿದ್ದ ಯುವಕ, ಕಿರುಕುಳ ತಾಳಲಾರದೆ ಅಪ್ರಾಪ್ತೆ ಆತ್ಮಹತ್ಯೆ!

ಪ್ರೀತಿಸುವಂತೆ ಪೀಡಿಸುತ್ತಿದ್ದ ಯುವಕನ ಕಿರುಕುಳ ತಾಳಲಾರದೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ನಂಜನಗೂಡಿನಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

young boy love torture student  self death in nanjangud kannada news gow
Author
First Published Jun 18, 2023, 11:38 PM IST

ನಂಜನಗೂಡು (ಜೂ.18): ಶಾಲೆಗೆ ಹೋಗುವಾಗ, ಬರುವಾಗ ಯುವಕನೊರ್ವ ಚುಡಾಯಿಸಿ ಪ್ರೀತಿಸುವಂತೆ ಪೀಡಿಸುತ್ತಿದ್ದ ಪರಿಣಾಮ, ಆತನ ಕಿರುಕುಳದಿಂದ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಬಂಚಹಳ್ಳಿಹುಂಡಿ ಗ್ರಾಮದಲ್ಲಿ ಜರುಗಿದೆ. ಬಂಚಹಳ್ಳಿಹುಂಡಿ ಗ್ರಾಮದ ರಮೇಶ್‌ ಎಂಬವರ ಪುತ್ರಿ ಚಂದನಾ (15) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಚಂದನಾ ತಾಂಡವಪುರ ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದು. ಬಂಚಹಳ್ಳಿಹುಂಡಿ ಗ್ರಾಮದ ವೆಂಕಟೇಶ್‌ ಎಂಬವರ ಪುತ್ರ ಶರತ್‌ ಎಂಬಾತ ಶಾಲೆಗೆ ಹೋಗುವಾಗ, ಬರುವಾಗ ಹಿಂಬಾಲಿಸಿಕೊಂಡು ಚುಡಾಯಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಚಂದನಾ ತನ್ನ ತಂದೆ ರಮೇಶ್‌ ಅವರಿಗೆ ವಿಷಯ ತಿಳಿಸಿದ್ದಳು. ರಮೇಶ್‌ ಆರೋಪಿ ವೆಂಕಟೇಶನಿಗೆ ಬುದ್ದಿವಾದ ಹೇಳಿದ್ದರು ಎನ್ನಲಾಗಿದೆ.

ಆ ನಂತರವೂ ಸಹ ವಿದ್ಯಾರ್ಥಿನಿಯನ್ನು ಚುಡಾಯಿಸುವುದನ್ನು ಮುಂದುವರೆಸಿದ್ದ ಕಾರಣ ರಮೇಶ್‌ ತನ್ನ ಮಗಳನ್ನು ಶಾಲೆಯಿಂದ ಬಿಡಿಸಿ ಮನೆಯಲ್ಲಿಯೇ ಉಳಿಸಿಕೊಂಡಿದ್ದರು. ಇದರಿಂದ ಮನನೊಂದ ವಿದ್ಯಾರ್ಥಿನಿ ಚಂದನಾ ಶುಕ್ರವಾರ ಬೆಳಗ್ಗೆ ಮನೆಯ ತೀರಿಗೆ ತನ್ನ ವೇಲ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

Bengaluru: ಮೀನು ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕರು

ಈ ಸಂಬಂಧ ಮೃತ ಚಂದನಾಳ ತಂದೆ ರಮೇಶ್‌ ನಂಜನಗೂಡು ಗ್ರಾಮಾಂತರ ಪೊಲೀಸ್‌ ಠಾಣೆಗೆ ಶರತ್‌ ಎಂಬಾತ ನನ್ನ ಮಗಳನ್ನು ಶಾಲೆಗೆ ಹೋಗುವಾಗ, ಬರುವಾಗ ಚುಡಾಯಿಸುತ್ತಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ದೂರು ನೀಡಿದ್ದಾರೆ.

"ಜೈ ಶ್ರೀ ರಾಮ್" ಘೋಷಣೆ ಕೂಗಲು ಒತ್ತಾಯಿಸಿ ಮುಸ್ಲಿಂ ವ್ಯಕ್ತಿ ಥಳಿಸಿ ಮರಕ್ಕೆ ಕಟ್ಟಿ ಹಾಕಿ

ದೂರು ದಾಖಲಿಸಿಕೊಂಡಿರುವ ಗ್ರಾಮಾಂತರ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಶಿವನಂಜಶೆಟ್ಟಿಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಯುವಕ ಶರತ್‌ನನ್ನು ಬಂಧಿಸಿ ಶವವನ್ನು ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಿಂತಿರುಗಿಸಿದ್ದಾರೆ. ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Follow Us:
Download App:
  • android
  • ios