ಅನಸೂಯ ಹಾಗೂ ವಿಜಯ್ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಜಯ್ ಕುಮಾರ್ ಅನಸೂಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಹೇಳಲಾಗುತ್ತಿದೆ. ಆತ್ಮಹತ್ಯೆಗೆ ಶರಣಾದ ಈ ಜೋಡಿ ಕಳೆದ ಎರಡು ತಿಂಗಳ ಹಿಂದೆ ಊರು ಬಿಟ್ಟು ನಾಪತ್ತೆಯಾಗಿತ್ತು. 

ಕೋಲಾರ(ಡಿ.27): ಮಹಿಳೆಯೊಂದಿಗೆ ಯುವಕ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಎಸ್.ಜೀಡಮಾಕಲಪಲ್ಲಿ ಗ್ರಾಮದಲ್ಲಿ ನಿನ್ನೆ(ಮಂಗಳವಾರ) ರಾತ್ರಿ ನಡೆದಿದೆ. 

Add Asianetnews Kannada as a Preferred SourcegooglePreferred

ಗ್ರಾಮದ ಮಹಿಳೆ ಅನಸೂಯ(35) ಹಾಗೂ ಯುವಕ ವಿಜಯ್ ಕುಮಾರ್(28) ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಜಯ್ ಕುಮಾರ್ ಅನಸೂಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಹೇಳಲಾಗುತ್ತಿದೆ. ಆತ್ಮಹತ್ಯೆಗೆ ಶರಣಾದ ಈ ಜೋಡಿ ಕಳೆದ ಎರಡು ತಿಂಗಳ ಹಿಂದೆ ಊರು ಬಿಟ್ಟು ನಾಪತ್ತೆಯಾಗಿತ್ತು. 

ಗೆಳೆಯರ ಜೊತೆ ಎಣ್ಣೆ ಪಾರ್ಟಿ ಮುಗಿಸಿ ಮಧ್ಯರಾತ್ರಿ ಮನೆಗೆ ಬಂದ ಪತಿಗೆ ಶಾಕ್; ಪ್ರಶ್ನಿಸಿದ್ದಕ್ಕೆ ಭೀಕರವಾಗಿ ಕೊಂದ ಪತ್ನಿ!

ಅನಸೂಯ ಮಂಜುನಾಥ್ ಎಂಬುವರೊಂದಿಗೆ ವಿವಾಹವಾಗಿ ಇಬ್ಬರು ಮಕ್ಕಳು ಇದ್ದರು. ವಿಜಯ್ ಕುಮಾರ್‌ ಅವಿವಾಹಿತನಾಗಿದ್ದನು. ಕಳೆದ ರಾತ್ರಿ ಗ್ರಾಮದ ಹೊರಗಿನ ಮರಕ್ಕೆ ನೇಣು ಬಿಗಿದುಕೊಂಡು ಈ ಜೋಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ರಾಯಲ್ಪಾಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.