ಶ್ರೀರಂಗಪಟ್ಟಣ: ಹಳೇ ವೈಷಮ್ಯ, ಯುವಕನ ಬರ್ಬರ ಹತ್ಯೆ

ಕೊಲೆಯಾದ ಯೋಗೇಶ್ ಹಲವು ವರ್ಷಗಳ ಹಿಂದೆ ಗ್ರಾಮದ ಎಸ್ಟೇಟ್ ಒಂದರಲ್ಲಿ ಕೆಲಸ ಮಾಡಿಕೊಂಡು ಅಲ್ಲೆ ನೆಲೆಸಿದ್ದ. ನಂತರ ಎಸ್ಟೇಟ್ ಕೆಲಸ ಬಿಟ್ಟು ಬಾಡಿಗೆ ಮನೆ ಮಾಡಿಕೊಂಡು ಬಾರ್‌ ಬೈಂಡಿಂಗ್, ಗಾರೆ ಕೆಲಸ ಪ್ರಸ್ತುತ ಪೈಂಟರ್ ಕೆಲಸ ಮಾಡುತ್ತಿದ್ದ. ಎಂದಿನಂತೆ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಹಳೇ ವೈಷಮ್ಯದ ಹಿನ್ನಲೆಯಲ್ಲಿ ಯೋಗೇಶ ನನ್ನು ಪರಿಚಿತರೇ ಕೊಲೆ ಮಾಡಿರುವುದಾಗಿ ಶಂಕೆ ವ್ಯಕ್ತವಾಗಿದೆ. 
 

Young Man Brutal Murder at Srirangapatna in Mandya grg

ಶ್ರೀರಂಗಪಟ್ಟಣ(ಡಿ.10):  ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ತಾಲೂಕಿನ ಕಾರೇಕುರ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. ಗ್ರಾಮದ ಯೋಗೇಶ್ (34) ದುಷ್ಕರ್ಮಿಗಳಿಂದ ಕೊಲೆಯಾದ ಯುವಕ. 

ಈತ ಹಲವು ವರ್ಷಗಳ ಹಿಂದೆ ಗ್ರಾಮದ ಎಸ್ಟೇಟ್ ಒಂದರಲ್ಲಿ ಕೆಲಸ ಮಾಡಿಕೊಂಡು ಅಲ್ಲೆ ನೆಲೆಸಿದ್ದ. ನಂತರ ಎಸ್ಟೇಟ್ ಕೆಲಸ ಬಿಟ್ಟು ಬಾಡಿಗೆ ಮನೆ ಮಾಡಿಕೊಂಡು ಬಾರ್‌ ಬೈಂಡಿಂಗ್, ಗಾರೆ ಕೆಲಸ ಪ್ರಸ್ತುತ ಪೈಂಟರ್ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಎಂದಿನಂತೆ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಹಳೇ ವೈಷಮ್ಯದ ಹಿನ್ನಲೆಯಲ್ಲಿ ಯೋಗೇಶ ನನ್ನು ಪರಿಚಿತರೇ ಕೊಲೆ ಮಾಡಿರುವುದಾಗಿ ಶಂಕೆ ವ್ಯಕ್ತವಾಗಿದೆ. 

ಗದಗ: ಜಮೀನಲ್ಲಿ ಮಲಗಿದ್ದ ರೈತ ಕಾರ್ಮಿಕನ ಬರ್ಬರ ಹತ್ಯೆ ಪ್ರಕರಣ, ರುಂಡ ಪತ್ತೆ ಹಚ್ಚಿದ ಪೊಲೀಸರು

ಶ್ರೀರಂಗಪಟ್ಟಣ ಟೌನ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮೃತ ದೇಹವನ್ನು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಜಿಲ್ಲಾ ಎಸ್ಪಿ ಎನ್. ಯತೀಶ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Latest Videos
Follow Us:
Download App:
  • android
  • ios