Asianet Suvarna News Asianet Suvarna News

Suicide Cases: ಟಿವಿ ನೊಡ್ಬೇಡ ಅಂದಿದ್ದಕ್ಕೆ ಚಾಕು ಇರಿದುಕೊಂಡು ಆತ್ಮಹತ್ಯೆ

*  ಪ್ರತಿ ನಿತ್ಯ ಟೀವಿ‌ ನೋಡವುದರಲ್ಲೇ ಮಗ್ನನಾಗಿರುತ್ತಿದ್ದ ಸಯ್ಯದ್
*  ಟೀವಿ ನೋಡಬೇಡ ಅಂತ ವಾರ್ನಿಂಗ್ ಮಾಡಿದ್ದರು ಮೃತ ಯುವಕನ ತಂದೆ
*  ಈ ಸಂಬಂಧ ಜೆ.ಜೆ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
 

Young Man Committed Suicide in Bengaluru grg
Author
Bengaluru, First Published Jan 10, 2022, 12:26 PM IST

ಬೆಂಗಳೂರು(ಜ.10):  ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ(Bengaluru) ವಿಚಿತ್ರ ಆತ್ಮಹತ್ಯೆ ಪ್ರಕರಣವೊಂದು ದಾಖಲಾಗಿದೆ. ಹೌದು, ಟಿವಿ ನೊಡ್ಬೇಡ ಅಂದಿದ್ದಕ್ಕೆ ಯುವಕನೊಬ್ಬ ಚಾಕು ಇರಿದುಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡ ಘಟನೆ ಜೆ.ಜೆ. ನಗರದ 11 ನೇ ಕ್ರಾಸ್ ನಲ್ಲಿ ಘಟನೆ ಕಳೆದ ರಾತ್ರಿ(ಭಾನುವಾರ) ನಡೆದಿದೆ. ಸಯ್ಯದ್ ಸಾಹೀಲ್ (23) ಎಂಬಾರನೇ ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ. 

ಸಯ್ಯದ್ ಸಾಹೀಲ್ ಪ್ರತಿ ನಿತ್ಯ ಟೀವಿ‌ ನೋಡವುದರಲ್ಲೇ ಮಗ್ನನಾಗಿರುತ್ತಿದ್ದನಂತೆ. ಹೀಗಾಗಿ ಸಯ್ಯದ್‌ನ ವರ್ತನೆಯಿಂದ ರೊಚ್ಚಿಗೆದ್ದ ತಂದೆ ಟೀವಿ ನೋಡಬೇಡ ಅಂತ ವಾರ್ನಿಂಗ್ ಮಾಡಿದ್ದರು. ಇಷ್ಟಕ್ಕೆ ಕುಪಿತಗೊಂಡ ಸಯ್ಯದ್‌ ಸ್ವತಃ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಈ ಸಂಬಂಧ ಜೆ.ಜೆ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ(Case) ದಾಖಲಾಗಿದೆ. 

Suicide Case: ಸಾಲ ತೀರಿಸಲಾಗದೇ ಆತ್ಮಹತ್ಯೆಗೆ ಶರಣಾದ ಅನ್ನದಾತ

ಅನಾರೋಗ್ಯದಿಂದ ಮನನೊಂದು ವ್ಯಕ್ತಿ ಸಾವು

ದಾಬಸ್‌ಪೇಟೆ(Dabaspet): ಅನಾರೋಗ್ಯದಿಂದ(Illness) ಬಳಲುತ್ತಿದ್ದ ವ್ಯಕ್ತಿಯೊಬ್ಬ ಮನನೊಂದು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾಬಸ್‌ಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸೋಂಪುರ ಹೋಬಳಿ ಕಂಬಾಳು ಗ್ರಾಮದ ಯತೀಶ್‌(32) ಆತ್ಮಹತ್ಯೆಗೊಳಗಾದ ದುರ್ದೈವಿಯಾಗಿದ್ದು, 9 ತಿಂಗಳುಗಳ ಹಿಂದೆ ವಿವಾಹವಾಗಿತ್ತು(Marriage) ಎನ್ನಲಾಗಿದೆ.

ಮೃತಪಟ್ಟ ಯತೀಶ್‌ ವಯಸ್ಸಿನಲ್ಲಿ ಕಿರಿಯರಾಗಿದ್ದರೂ ಬಹಳ ದಿನಗಳಿಂದ ಅನಾರೋಗ್ಯಕ್ಕಿಡಾಗಿದ್ದರು ಎನ್ನಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಕಡಿಮೆಯಾಗದ ಕಾರಣ ಮಾನಸಿಕವಾಗಿ ನೊಂದು ಜ.7ರಂದು ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ದಾಬಸ್‌ಪೇಟೆ ಪೊಲೀಸರು(Police) ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕ್ರಿಮಿನಾಶಕ ಸೇವಿಸಿ ಯುವತಿ ಆತ್ಮಹತ್ಯೆ

ಗೋಕರ್ಣ(Gokarna): ವಿಷ(Poison) ಸೇವಿಸಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ.

ರುದ್ರಪಾದದ ಯುವತಿ ಕವಿತಾ ದೇವು ಗೌಡ (20) ಮೃತಪಟ್ಟ ಯುವತಿ. ಶನಿವಾರ ಮಧ್ಯಾಹ್ನ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದು, ಆನಂತರ ಹೆಚ್ಚಿನ ಚಿಕಿತ್ಸೆಗೆ ಕುಮಟಾಕ್ಕೆ ಕಳುಹಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸ ಫಲಕಾರಿಯಾಗಿಲ್ಲ. ಕುಮಟಾ(Kumta) ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿದ್ದು, ಪಿ.ಐ. ವಸಂತ ಆಚಾರ್ಯ, ಪಿಎಸ್‌ಐ ಸುಧಾ ಅಘನಾಶಿನಿ ಕುಮಟಾಕ್ಕೆ ತೆರಳಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Suicide Case: ಮೊಬೈಲ್‌ ಆ್ಯಪ್‌ ಸಾಲ ತೀರಿಸಲಾಗದೆ ಆತ್ಮಹತ್ಯೆ

ಯುವತಿ ಈ ಹಿಂದೆ ಸಹ ಆತ್ಮಹತ್ಯೆಗೆ ಯತ್ನಿಸಿ ಬದುಕಿದ್ದರು. ಅವರು ಪ್ರೀತಿಸುತ್ತಿದ್ದ ಹುಡುಗ ಏಳು ತಿಂಗಳ ಹಿಂದೆ ಸಮುದ್ರದಲ್ಲಿ ಬಿದ್ದು ಪ್ರಾಣ ಕಳೆದುಕೊಂಡಿದ್ದರು ಎಂದು ತಿಳಿದು ಬಂದಿದೆ.

ಹೊಟ್ಟೆನೋವು ತಾಳಲಾರದೇ ವ್ಯಕ್ತಿ ನೇಣಿಗೆ ಶರಣು

ದಾಬಸ್‌ಪೇಟೆ: ಹೊಟ್ಟೆನೋವು(Stomach Pain) ತಾಳಲಾರದೆ ವ್ಯಕ್ತಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾಬಸ್‌ಪೇಟೆ ಪಟ್ಟಣದಲ್ಲಿ ನಡೆದಿದೆ.

ಮೂಲತಃ ಆಂಧ್ರಪ್ರದೇಶದ(Andhra Pradesh) ಕೊತ್ತೂರು ಗ್ರಾಮದ ನಿವಾಸಿ ರಾಮಕೃಷ್ಣ ಮೃತ ವ್ಯಕ್ತಿ. ಎರಡು ವರ್ಷಗಳಿಂದ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಹಿಂಭಾಗದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎನ್ನಲಾಗಿದೆ.
ಮೃತಪಟ್ಟ ರಾಮಕೃಷ್ಣ ಸೋಂಪುರ ಕೈಗಾರಿಕಾ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದು, ಒಂದು ವರ್ಷದಿಂದ ಹೊಟ್ಟೆನೋವು ಬರುತ್ತಿತ್ತು ಎನ್ನಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಕಡಿಮೆಯಾಗದ ಕಾರಣ ಮಾನಸಿಕವಾಗಿ ನೊಂದು ಜ.7ರಂದು ಮಧ್ಯಾಹ್ನ 2.30 ಗಂಟೆಯ ಸಮಯದಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ದಾಬಸ್‌ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow Us:
Download App:
  • android
  • ios