ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಯುವಕ| ಬಾಗಲಕೋಟೆ ಜಿಲ್ಲೆಯ ಇಳಕಲ್ಲ ತಾಲೂಕಿನ ಗೋರಬಾಳ ಗ್ರಾಮದಲ್ಲಿ ನಡೆದ ಘಟನೆ| ತೀವ್ರ ಮನನೊಂದು ಆತ ತಮ್ಮ ದಾಬಾದಲ್ಲೇ ನೇಣು ಬಿಗಿದು ಆತ್ಮಹತ್ಯೆ|  

ಬಾಗಲಕೋಟೆ(ಅ.28): ತಂದೆ-ತಾಯಿ ಇಬ್ಬರೂ ತೀರಿ ಹೋಗಿದ್ದರಿಂದ, ಒಂಟಿತನಕ್ಕೆ ಬೇಸತ್ತು, ಜೀವನದಲ್ಲಿ ಜಿಗುಪ್ಸೆಯಾಗಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ಲ ತಾಲೂಕಿನ ಗೋರಬಾಳ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ.

Add Asianetnews Kannada as a Preferred SourcegooglePreferred

ಗೋರಬಾಳ ಗ್ರಾಮದ ಭೀಮಸಿ ಲಕ್ಷ್ಮಣ ಚಿತ್ತರಗಿ (22) ಮೃತ ಯುವಕ. ಈತ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿ ನೂತನವಾಗಿ ಗಡಗಿ ಚಿಕ್ಕನ್‌ ದಾಬಾ ಪ್ರಾರಂಭಿಸಿದ್ದ. ಈಚೆಗೆ ಆತನ ತಂದೆ-ತಾಯಿ ಮೃತಪಟ್ಟಿದ್ದರು. ಹೀಗಾಗಿ ಆತನಿಗೆ ಒಂಟಿತನ ಕಾಡುತಿತ್ತು. ಇದರಿಂದ ತೀವ್ರ ಮನನೊಂದು ಆತ ತಮ್ಮ ದಾಬಾದಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. 

ಬಿಬಿಎಂಪಿ ಮಾಜಿ ಕಾರ್ಪೊರೇಟರ್‌ ಪತ್ನಿ ಆತ್ಮಹತ್ಯೆ

ಈ ಕುರಿತು ಇಳಕಲ್ಲ ಶಹರ ಪಿಎಸೈ ರಮೇಶ ಜಲಗೇರಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.