ಗಣಪತಿ ಪೆಂಡಾಲಿನಲ್ಲಿ ಹಾಡು ಹಾಕುವ ವಿಚಾರಕ್ಕೆ ಗಲಾಟೆಯಾಗಿ ಬಿಹಾರ ಮೂಲದ ಯುವಕನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತುಮಕೂರು ನಗರದ ಅಂತಸರನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ತುಮಕೂರು (ಸೆ.10): ಗಣಪತಿ ಪೆಂಡಾಲಿನಲ್ಲಿ ಹಾಡು ಹಾಕುವ ವಿಚಾರಕ್ಕೆ ಗಲಾಟೆಯಾಗಿ ಬಿಹಾರ ಮೂಲದ ಯುವಕನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತುಮಕೂರು ನಗರದ ಅಂತಸರನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚೋಟನ್ ಕುಮಾರ್(19) ಕೊಲೆಯಾದ ಯುವಕ, ಬಿಹಾರದ ರಾಂಬಾಬು, ಮೌಂಟು ಕುಮಾರ್, ಸಂಜೀವ್ ಕುಮಾರ್, ಕೊಲೆ ಮಾಡಿದ ಆರೋಪಿಗಳು. 

ಗಣೇಶ ವಿಸರ್ಜನೆ ವೇಳೆ ಡಿಜೆ ಬಳಕೆ ಮಾಡದೆ ಅದೇ ಹಣದಿಂದ ರಸ್ತೆ ರಿಪೇರಿ ಕಿನ್ನಾಳ ಗ್ರಾಮಸ್ಥರು!

ಸೆ.7ರಂದು ಗಣಪತಿ ಪ್ರತಿಷ್ಠಾಪನೆ ನಂತರ ಹಾಡು ಹಾಕಲಾಗಿತ್ತು. ಹಾಡು ಬದಲಾಯಿಸುವ ವಿಚಾರಕ್ಕೆ ಯುವಕ ಹಾಗೂ ಆರೋಪಿಗಳ ನಡುವೆ ಜಗಳ ನಡೆದಿತ್ತು. ಈವೇಳೆ ಚೋಟನ್ ಕುಮಾರ ಕುತ್ತಿಗೆ, ಬೆನ್ನುಗೆ ಚಾಕು ಇರಿದಿದ್ದ ಆರೋಪಿಗಳು ಇದರಿಂದ ಗಂಭೀರ ಗಾಯಗೊಂಡಿದ್ದ ಮೃತ ಯುವಕ. ಕೂಡಲೇ ಶ್ರೀದೇವಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಯುವಕ. ಹತ್ಯೆ ಘಟನೆ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.