Asianet Suvarna News Asianet Suvarna News

ಕಲಬುರಗಿ: ತಂಗಿ ಎಂಗೇಜ್‌ಮೆಂಟ್‌ಗೆ ತರಕಾರಿ ತರಲು ಹೋಗಿದ್ದ ಅಣ್ಣನ ಬರ್ಬರ ಕೊಲೆ

* ಕಲಬುರಗಿ ನಗರದ ತರಕಾರಿ ಮಾರ್ಕೆಟ್‌ನಲ್ಲಿ ನಡೆದ ಕೊಲೆ
* ಸಾವಿರಾರು ಜನರ ಸಮ್ಮುಖದಲ್ಲೇ ಯುವಕನ ಬರ್ಬರ ಹತ್ಯೆ
* ಈ ಸಂಬಂಧ ಕಲಬುರಗಿಯ ವಿವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Young Man Murder in Kalaburagi grg
Author
Bengaluru, First Published Jun 6, 2021, 12:52 PM IST

ಕಲಬುರಗಿ(ಜೂ.06):  ತಂಗಿಯ ಎಂಗೇಜ್‌ಮೆಂಟ್‌ಗೆ ತರಕಾರಿ ತರಲು ಹೋಗಿದ್ದ ಅಣ್ಣ ಭೀಕರವಾಗಿ ಕೊಲೆಯಾದ ಘಟನೆ ನಗರದ ಹೊರವಲಯದ ಕೋಟನೂರ ಬಳಿಯ ತರಕಾರಿ ಮಾರ್ಕೆಟ್‌ನಲ್ಲಿ ಇಂದು(ಭಾನುವಾರ) ನಡೆದಿದೆ. ನಿಖಿಲ್ (24) ಕೊಲೆಯಾದ ದುರ್ದೈವಿಯಾಗಿದ್ದಾನೆ.

ನಿಖಿಲ್ ತಂಗಿ ಪ್ರೀತಿಸುತ್ತಿದ್ದ ಯುವಕನ ಹಾಗೂ ಆತನ ಸ್ನೇಹಿತರು ಸೇರಿ ನಿಖಿಲ್‌ನನ್ನ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಕೊಲೆಯಾದ ನಿಖಿಲ್‌ ತಂಗಿಯ ಎಂಗೇಜ್‌ಮೆಂಟ್ ಬೇರೊಬ್ಬ ಯುವಕನ ಜೊತೆ ನಾಳೆ(ಸೋಮವಾರ) ನಡೆಯಬೇಕಿತ್ತು. ಹೀಗಾಗಿ ಎಂಗೇಜ್‌ಮೆಂಟ್ ಕಾರ್ಯಕ್ರಮಕ್ಕಾಗಿ ತಾಯಿ ಮತ್ತು ಅಣ್ಣನೊಂದಿಗೆ ತರಕಾರಿ ಖರೀದಿಗಾಗಿ ನಿಖಿಲ್ ತೆರಳಿದ್ದನು ಎಂದು ತಿಳಿದು ಬಂದಿದೆ. 

ಅನಾರೋಗ್ಯದ ಮನೆಯಲ್ಲಿ ಶಾಪದಂಥ ಮಗ...ಮನೆಯೇ ನರಕ!

ತರಕಾರಿ ಖರೀದಿ ವೇಳೆ ಕಾರ್‌ನಲ್ಲಿ ಬಂದ ವಿಶಾಲ್‌ ಮತ್ತು ತಂಡದಿಂದ ನಿಖಿಲ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ನಿಖಿಲ್ ಸ್ಥಳದಲ್ಲೇ ಸಾವನ್ನಪ್ಪಿದರೆ ಆತನ ತಾಯಿ, ಅಣ್ಣ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿರಾರು ಜನರ ಸಮ್ಮುಖದಲ್ಲೇ ಯುವಕನ ಬರ್ಬರ ಹತ್ಯೆಯಾಗಿದೆ. ಇದರಿಂದ ಕಲಬುರಗಿ ಜನ ಭಯಭೀತರಾಗಿದ್ದಾರೆ. 

ಗಾಯಾಳುಗಳನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಕಲಬುರಗಿಯ ವಿವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

Follow Us:
Download App:
  • android
  • ios