ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವತಿ| ಮೈಸೂರಿನ ವಿದ್ಯಾನಗರದಲ್ಲಿ ನಡೆದ ಘಟನೆ| ಈ ಸಂಬಂಧ ನಜರ್‌ಬಾದ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು|

ಮೈಸೂರು(ಜೂ.22): ಹೊಟ್ಟೆನೋವು ತಡೆಯಲಾಗದೆ ಯುವತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ. 

Add Asianetnews Kannada as a Preferred SourcegooglePreferred

ವಿದ್ಯಾನಗರದ ನಿವಾಸಿ ಸಂಜನಾ(21) ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾಳೆ. ಎಂಸಿಎ ವ್ಯಾಸಂಗ ಮಾಡುತ್ತಿದ್ದ ಯುವತಿಗೆ ಪ್ರತಿ ತಿಂಗಳ ಋುತುಸ್ತ್ರಾವದ ವೇಳೆ ವಿಪರೀತ ಹೊಟ್ಟೆನೋವು ಬರುತ್ತಿತ್ತು. 

ಮಂಗಳಮುಖಿ ಎಂದು ಬಾಲಕನ ಅಣಕ, ನೊಂದವ ನೇಣಿಗೆ ಶರಣಾದ

ಈ ನೋವನ್ನು ತಡೆಯಲಾಗದ ಯುವತಿ ಶನಿವಾರ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ನಜರ್‌ಬಾದ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.