Asianet Suvarna News Asianet Suvarna News

ದಿನ ಭವಿಷ್ಯ: ಈ ರಾಶಿಯವರು ಇಡೀ ದಿನ ಹೆಚ್ಚು ಕ್ರಿಯಾಶೀಲವಾಗಿ ಇರಲಿದ್ದೀರಿ!

17 ಏಪ್ರಿಲ್ 2021 ಶನಿವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

Daily Horoscope Of 17 April 2021 in kannada pod
Author
Bangalore, First Published Apr 17, 2021, 7:06 AM IST

ಮೇಷ: ಸತ್ಯ ಹೇಳುವುದರಿಂದ ಕ್ಷಣಿಕವಾಗಿ ನೋವು ಆದರೂ ಮುಂದೆ ಅದರಿಂದ ಒಳ್ಳೆಯ ಪ್ರತಿಫಲ ಸಿಕ್ಕಲಿದೆ. ಧೈರ್ಯ ಹೆಚ್ಚಾಗಲಿದೆ.

ವೃಷಭ: ನೀವು ಮಾಡಿದ ತಪ್ಪಿನಿಂದಾಗಿ ಮನೆ ಮಂದಿಗೆ ತೊಂದರೆಯಾಗಲಿದೆ. ಪದೋನ್ನತಿ ಸಿಗಲಿದೆ. ಹೊಸ ವಸ್ತುಗಳನ್ನು ಕೊಂಡುಕೊಳ್ಳಲಿದ್ದೀರಿ.

ಮಿಥುನ: ಅಪರಿಚಿತರಿಂದ ಅಂತರ ಕಾಯ್ದುಕೊಳ್ಳಿ. ನಿಮ್ಮ ಶಕ್ತಿಯನ್ನು ಅರಿತುಕೊಂಡು ಅದಕ್ಕೆ ತಕ್ಕಂತೆ ಲೆಕ್ಕಾಚಾರಗಳನ್ನು ಹಾಕಿಕೊಳ್ಳಿ. ಶುಭಫಲ.

ಕಟಕ: ತಪ್ಪನ್ನೇ ಹುಡುಕುತ್ತಾ ಹೋದರೆ ಮನಸ್ಸು ಕೆಡಲಿದೆ. ಇರುವುದರಲ್ಲಿ ಸಂತೋಷವನ್ನು ಹುಡುಕಿಕೊಳ್ಳಿ. ಅತಿಯಾದ ಆಸೆ ಬೇಡ.

ಅಮಾವಾಸ್ಯೆಯಂದು ನೀವು ಯಾಕೆ ಜಾಗರೂಕರಾಗಿರೇಕು ಗೊತ್ತಾ?

ಸಿಂಹ - ನಿಮ್ಮ ಕಾರ್ಯಗಳಿಗೆ ನಿಮ್ಮ ವಿರುದ್ಧದ ಟೀಕೆಗೆ ಉತ್ತರವಾಗಲಿ. ಮಾತಿನಿಂದ ಮಾನ ಹಾನಿಯಾಗುವ ಸಾಧ್ಯತೆ ಹೆಚ್ಚು.

ಕನ್ಯಾ - ದುಷ್ಟರನ್ನು ಕಂಡರೆ ದೂರವಿರಿ. ಆಹಾರ ಕ್ರಮದಲ್ಲಿ ವ್ಯತ್ಯಯವಾಗಲಿದೆ. ಇಂದು ಸ್ವಾರ್ಥ ವ್ಯಕ್ತಿಗಳಿಗೆ ತಕ್ಕ ಉತ್ತರ ನೀಡಲಿದ್ದೀರಿ.

ತುಲಾ - ನಿಧಾನವೇ ಪ್ರಧಾನವಾಗಿರಲಿ. ಮಕ್ಕಳ ವಿಚಾರದಲ್ಲಿ ಆತುರ ಪಡುವುದು ಬೇಡ. ವಾಹನ ಚಾಲನೆ ವೇಳೆ ಎಚ್ಚರಿಕೆ ಇರಲಿ.

ವೃಶ್ಚಿಕ - ಹಣಕ್ಕಿಂತ ಗುಣಕ್ಕೆ ಹೆಚ್ಚು ಬೆಲೆ ನೀಡಿ. ನಿಮ್ಮ ಸಹಾಯಕ್ಕೆ ಬಂದ ವ್ಯಕ್ತಿಗಳ ಬಗ್ಗೆ ಗೌರವ ಇರಲಿ. ಎಲ್ಲವೂ ಒಳ್ಳೆಯದ್ದೇ ಆಗಲಿ

ಹಣ ಕೂಡಿಡುವುದರಲ್ಲಿ ಈ ರಾಶಿಯವರು ನಿಪುಣರು;ನಿಮ್ಮ ರಾಶಿ ಇದ್ಯಾ ನೋಡಿ !

 

ಧನುಸ್ಸು: ಇಡೀ ದಿನ ಹೆಚ್ಚು ಕ್ರಿಯಾಶೀಲವಾಗಿ ಇರಲಿದ್ದೀರಿ. ತಾಯಿಯ ಸಹಕಾರದಿಂದ ಕೆಲಸದಲ್ಲಿ ಪ್ರಗತಿ ಸಾಧ್ಯವಾಗಲಿದೆ.

ಮಕರ: ಬೆಳಗ್ಗೆಯಿಂದಲೇ ಉತ್ಸಾಹದಿಂದ ಕೆಲಸದಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಸಣ್ಣ ಪುಟ್ಟ ಸಮಸ್ಯೆಗಳನ್ನು ಹೆಚ್ಚು ಪರಿಗಣಿಸದಿರಿ 

ಕುಂಭ: ಸಂಬಂಧಗಳಲ್ಲಿ ಲಾಭ-ನಷ್ಟದ ಲೆಕ್ಕಾಚಾರ ಹಾಕದಿರಿ. ದಿನ ಪೂರ್ತಿ ಕಾರ್ಯ ಮಗ್ನರಾಗಲಿದ್ದೀರಿ. ಅತಿಯಾದ ಕೋಪ ಬೇಡ.

ಮೀನ: ಮತ್ತೊಬ್ಬರ ಮನಸ್ಸಿಗೆ ನೋವಾಗುತ್ತದೆ ಎನ್ನುವ ಕಾರಣಕ್ಕೆ ಸುಳ್ಳು ಹೇಳುವುದು ಬೇಡ. ನೇರ, ನಿಷ್ಠೂರವಾಗಿ ನಡೆದುಕೊಳ್ಳಿ

Follow Us:
Download App:
  • android
  • ios