ದಿನ ಭವಿಷ್ಯ: ಈ ರಾಶಿಯವರು ಸಂಜೆ ವೇಳೆಗೆ ಶುಭ ಸುದ್ದಿ ಕೇಳಲಿದ್ದೀರಿ
21 ಜುಲೈ 2020 ಮಂಗಳವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ
ಮೇಷ: ನಿಮ್ಮ ಸಮಸ್ಯೆಗಳಿಗೆ ನೀವೇ ಪರಿಹಾರ ಕಂಡುಕೊಳ್ಳಬೇಕು. ಹಿರಿಯರ ಮಾತಿಗೆ ವಿರುದ್ಧವಾಗಿ ಹೋದರೆ ಕಷ್ಟವಾಗಬಹುದು.
ವೃಷಭ: ಇಂದು ನಿಮಗೆ ಗುರು ಬಲ ಚೆನ್ನಾಗಿದೆ. ಗಣೇಶನ ಆರಾಧನೆ ಮಾಡಿ. ಮನಸ್ಸನ್ನು ಶಾಂತವಾಗಿ ಇಟ್ಟುಕೊಂಡರೆ ಯಶಸ್ಸು ಸಾಧ್ಯ.
ಮಿಥುನ: ನಾಳೆಯನ್ನು ನೆನೆಯುತ್ತಾ ಈ ದಿನವನ್ನು ಹಾಳು ಮಾಡಿಕೊಳ್ಳಬೇಡಿ. ಬಹುದಿನಗಳ ಗೊಂದಲಕ್ಕೆ ಇಂದು ತೆರೆ ಬೀಳಲಿದೆ.
ಕಟಕ: ನಿಮ್ಮ ಪಾಲಿನ ಜವಾಬ್ಧಾರಿಗಳನ್ನು ಅಚ್ಚುಕಟ್ಟಾಗಿ ಮಾಡಿ ಮುಗಿಸಿ. ಮತ್ತೊಬ್ಬರ ನಂಬಿಕೆಗೆ ನಿಮ್ಮಿಂದ ಧಕ್ಕೆಯಾಗದಿರಲಿ.
ಚಿಕ್ಕ ವಯಸ್ಸಿನಲ್ಲಿಯೇ ಧನವಂತರಾಗುವ ಅದೃಷ್ಟ ಈ ರಾಶಿಯವರಿಗಿದೆ!
ಸಿಂಹ: ಶ್ರಮಪಟ್ಟು ಕೆಲಸ ಮಾಡುವುದಕ್ಕೆ ಬದಲಾಗಿ ತಾಳ್ಮೆಯಿಂದ, ಬುದ್ಧಿವಂತಿಕೆಯಿಂದ ಕೆಲಸ ಮಾಡಿ. ಅಂದುಕೊಂಡದ್ದು ನೆರವೇರಲಿದೆ.
ಕನ್ಯಾ: ಗೆಲುವು ಬೇಕು ಎಂದು ಕನಸು ಕಂಡರೆ ಅದು ಸಿಕ್ಕುವುದಿಲ್ಲ. ಅದಕ್ಕೆ ತಕ್ಕುದಾದ ಶ್ರಮವನ್ನು ಹಾಕಿದರೆ ಮಾತ್ರ ಜಯಶಾಲಿಯಾಗುವಿರಿ
ತುಲಾ: ನಿಮ್ಮ ಕೈಲಿ ಆಗದ ಕೆಲಸಗಳನ್ನು ಒಪ್ಪಿಕೊಂಡು ನರಳುವುದು ಬೇಡ. ಅತಿಯಾದ ಉತ್ಸಾಹವೂ ಒಮ್ಮೊಮ್ಮೆ ಕೈ ಕೊಡುವ ಸಾಧ್ಯತೆ ಇರುತ್ತದೆ.
ವೃಶ್ಚಿಕ: ಕಾರಣವಿಲ್ಲದೇ ಕೋಪ ಮಾಡಿಕೊಳ್ಳುವುದು, ಸಣ್ಣ ವಿಚಾರಗಳಿಗೂ ತಲೆ ಕೆಡಿಸಿಕೊಳ್ಳುವುದು ಬೇಡ. ನೆಮ್ಮದಿಯಿಂದ ಮುಂದೆ ಸಾಗಿ.
ಪತಿಯ ಶ್ರೇಯೋಭಿವೃದ್ಧಿಗೆ ಮಾಡುವ ಭೀಮನ ಅಮವಾಸ್ಯೆ ಪೂಜೆ!
ಧನಸ್ಸು: ಸಿಗದ ವಸ್ತುಗಳ ಬಗ್ಗೆ ಚಿಂತೆ ಮಾಡುತ್ತಾ ಕೂರುವುದು ಬೇಡ. ನಿಮ್ಮ ಪಾಲಿನ ಕೆಲಸ ಕಾರ್ಯಗಳನ್ನು ಸರಿಯಾಗಿ ಮಾಡಿ ಮುಗಿಸಿ.
ಮಕರ: ಮನೆಯಲ್ಲಿ ಸಂತಸದ ವಾತಾವರಣ ಇರಲಿದೆ. ಹೊಸ ಅವಕಾಶಗಳು ನಿಮ್ಮನ್ನು ಹರಸಿ ಬರಲಿವೆ. ಆರ್ಥಿಕವಾಗಿ ಒಳ್ಳೆಯ ದಿನವಿದು.
ಕುಂಭ: ಸಂಜೆ ವೇಳೆಗೆ ಶುಭ ಸುದ್ದಿ ಕೇಳಲಿದ್ದೀರಿ. ಆರೋಗ್ಯದಲ್ಲಿ ಸ್ಥಿರತೆ. ಸಣ್ಣ ಸಣ್ಣ ವಿಚಾರಗಳನ್ನು ಕಡೆಗಣನೆ ಮಾಡಬೇಡಿ.
ಮೀನ: ಉಗುರಿನಲ್ಲಿ ಹೋಗುವುದಕ್ಕೆ ಕೊಡಲಿ ತೆಗೆದುಕೊಳ್ಳುವುದು ಬೇಡ. ಹೊಸ ವಸ್ತುಗಳನ್ನು ಕೈಗೆತ್ತಿಕೊಳ್ಳಲಿದ್ದೀರಿ. ಶುಭ ಫಲ.