3 ಮಾರ್ಚ್ 2022, ಬುಧವಾರದ ಭವಿಷ್ಯ ಹೇಗಿದೆ?ಯಾವ ರಾಶಿಗೆ ಶುಭ ಫಲವಿದೆ?ವೃಷಭಕ್ಕೆ ಸಂಯಮ ಮೀರಬಾರದ ದಿನ

ಮೇಷ(Aries): ಸರ್ಕಾರಿ ವಲಯದ ಕೆಲಸಗಳಲ್ಲಿ ನೀವು ಮಾನಸಿಕ ಒತ್ತಡವನ್ನು ಎದುರಿಸಬೇಕಾಗಬಹುದು. ಕೆಲಸದಲ್ಲಿ ಕ್ರಿಯಾಶೀಲತೆ ಹೆಚ್ಚಿಸುವತ್ತ ಗಮನ ಹರಿಸಿದರೆ ಲಾಭವಿದೆ. ನಿರುದ್ಯೋಗಿಗಳಿಗೆ ಉದ್ಯಮ ಆರಂಭಿಸಲು ಸಕಾಲ. ಬಡವರಿಗೆ ವಸ್ತ್ರ ದಾನ ಮಾಡಿ. ರಾಮ ಧ್ಯಾನ ಮಾಡಿ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವೃಷಭ(Taurus): ಕೌಟುಂಬಿಕವಾಗಿ ಸಣ್ಣ ಸಣ್ಣ ವಿಚಾರಗಳು ಮನಸ್ಸಿನ ನೆಮ್ಮದಿಗೆಡಿಸಲಿವೆ. ತಾಳ್ಮೆ- ಸಂಯಮದಿಂದ ಮುಂದುವರಿಯಿರಿ. ಮನಸ್ಸು ಬಿಚ್ಚಿ ಮಾತನಾಡುವುದರಿಂದ ಬಹುಕಾಲದಿಂದ ಮನಸ್ಸನ್ನು ಹದಗೆಡಿಸಿದ್ದ ಸಮಸ್ಯೆಗೆ ಪರಿಹಾರ ಸಿಗಲಿದೆ. ರಾಘವೇಂದ್ರ ಸ್ವಾಮಿಯ ಸ್ಮರಣೆ ಮಾಡಿ.

ಮಿಥುನ(Gemini): ಮತ್ತೊಬ್ಬರಿಗೆ ಕೆಡುಕು ಬಯಸ ಹೋಗಬೇಡಿ. ಅದು ತಿರುಗು ಬಾಣವಾದೀತು. ಯಾರೊಂದಿಗೂ ವಿನಾ ಕಾರಣ ವಾದ ಮಾಡಬೇಡಿ. ವಾಹನಗಳ ಚಾಲನೆಯಲ್ಲಿ ಎಚ್ಚರ ಅಗತ್ಯ. ಪಾಲುದಾರರೊಂದಿಗೆ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆಯಿದೆ. ವಿಷ್ಣು ಸಹಸ್ರನಾಮ ಪಠಣ ಮಾಡಿ. 

ಕಟಕ(Cancer): ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ನೆರವು ಸಿಗಲಿದೆ. ಆಕಸ್ಮಿಕ ಧನಲಾಭದಿಂದ ಕಾರ್ಯಸಿದ್ಧಿಯಾಗಲಿದೆ. ಮನೆಯಲ್ಲಿ ಶುಭ ಕಾರ್ಯಗಳಿಂದ ಮನಸ್ಸು ಪ್ರಫುಲ್ಲಿತವಾಗುತ್ತದೆ. ಆರೋಗ್ಯದ ವಿಚಾರದಲ್ಲಿ ಹೆಚ್ಚಿನ ಎಚ್ಚರಿಕೆ ಅಗತ್ಯ. ರಾಯರ ಸ್ಮರಣೆ ಮಾಡಿ. 

ಸಿಂಹ(Leo): ನೀವೇನೇ ಯೋಚನೆ ಮಾಡಿದರೂ ಅದು ತಾನಾಗಿಯೇ ಸಿದ್ದಿಸುವ ಮೂಲಕ ನಿಮ್ಮ ಆತ್ಮಶಕ್ತಿಯ ಬಗ್ಗೆ ನಿಮಗೇ ಅಚ್ಚರಿಯೆನಿಸುವುದು. ಬಂಧುಮಿತ್ರರ ಸಹಕಾರದಿಂದ ಕಾರ್ಯಗಳು ಮುಂದೆ ಸಾಗುವುವು. ಕುಲದೇವತಾ ಪ್ರಾರ್ಥನೆ ಮಾಡಿ. 

Temples Of India: ದೋಸೆ, ಚಾಕ್ಲೇಟ್, ನೂಡಲ್ಸ್... ಇವೇ ಇಲ್ಲಿ ದೇವರಿಗೆ ನೈವೇದ್ಯ, ಭಕ್ತರಿಗೆ ಪ್ರಸಾದ! ಎಲ್ಲಿ ಅಂದ್ರಾ?

ಕನ್ಯಾ(Virgo): ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಹಲವಾರು ಅವಕಾಶಗಳು ಕಂಡುಬರುತ್ತದೆ. ಪ್ರೀತಿಪಾತ್ರರ ಸಮಾಗಮದಿಂದ ಉತ್ಸಾಹ ಹೆಚ್ಚುವುದು. ಪಿತ್ರಾರ್ಜಿತ ಆಸ್ತಿಯ ನಿರೀಕ್ಷೆಯಲ್ಲಿದ್ದಲ್ಲಿ ಆ ಸಂಬಂಧ ಶುಭ ಸಮಾಚಾರ ಕೇಳಲಿದ್ದೀರಿ. ಕೃಷ್ಣನಿಗೆ ತುಳಸಿ ಅರ್ಪಿಸಿ. 

ತುಲಾ(Libra): ಶೈಕ್ಷಣಿಕ ರಂಗದಲ್ಲಿ, ಪರೀಕ್ಷೆಗಳಲ್ಲಿ ಭಾಗವಹಿಸಿದವರಿಗೆ ಹಾಗೂ ಸಂದರ್ಶನ ಎದುರಿಸಿದವರಿಗೆ ಉತ್ತಮ ಫಲಿತಾಂಶ ದೊರೆಯಲಿದೆ. ಕೋಪ ನಿಯಂತ್ರಿಸಿಕೊಳ್ಳಿ. ಹೊಸ ಸಾಹಸಗಳಿಗೆ ಕೈ ಹಾಕುವಿರಿ. ಉದರ ಹಾಗೂ ಹೃದಯ ಸಂಬಂಧಿ ಸಮಸ್ಯೆಗಳು ಎದುರಾಗಬಹುದು. ಗೋವಿಗೆ ಆಹಾರ ನೀಡಿ. 

ವೃಶ್ಚಿಕ(Scorpio): ದೊಡ್ಡ ಲಾಭಕ್ಕಾಗಿ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಕೆಲವು ಜನರು ತಪ್ಪು ಮಾಹಿತಿ ನೀಡುವ ಮೂಲಕ ನಿಮ್ಮನ್ನು ದಾರಿ ತಪ್ಪಿಸಲು ಪ್ರಯತ್ನಿಸಬಹುದು. ಅಧಿಕಾರಿ ವರ್ಗಕ್ಕೆ ಸ್ಥಾನ ಬದಲಾವಣೆ ಸಾಧ್ಯತೆ ಇದೆ. ಮನೆದೇವರಿಗೆ ತುಪ್ಪದ ದೀಪ ಹಚ್ಚಿ. 

Capricorn Personality Traits: ಹಟ, ಛಲ, ಮಹತ್ವಾಕಾಂಕ್ಷೆ.. ಇದು ಮಕರ ರಾಶಿಯವರ ಹುಟ್ಟುಗುಣ

ಧನುಸ್ಸು(Sagittarius): ಉದ್ಯೋಗದಲ್ಲಿರುವ ಜನರು ತಮ್ಮ ಬಾಕಿ ಇರುವ ಕೆಲಸವನ್ನು ಕಚೇರಿಯಲ್ಲಿ ಮೊದಲು ಪೂರ್ಣಗೊಳಿಸಿ. ನಿರೀಕ್ಷೆಯನ್ನೇ ಕೈ ಬಿಟ್ಟಿದ್ದ ದೊಡ್ಡ ಮೊತ್ತದ ಸಾಲ ಹಿಂದಿರುಗಿ ಬರಲಿದೆ. ಮಕ್ಕಳ ಪ್ರಗತಿ ಸಂತಸ ತರಲಿದೆ. ಸಂಗಾತಿಯ ಸಂಪೂರ್ಣ ಸಹಕಾರ ಇರಲಿದೆ. ಲಕ್ಷ್ಮೀ ವೆಂಕಟೇಶ್ವರ ಸ್ಮರಣೆ ಮಾಡಿ. 

ಮಕರ(Capricorn): ಪರರಿಂದ ವಂಚನೆಗೆ ಒಳಗಾಗುವ ಸಂಭವಗಳಿವೆ. ಕೆೈ ಕೆಳಗೆ ಕೆಲಸಕ್ಕಿರುವವರಿಂದ ತೊಂದರೆ ಎದುರಾಗಬಹುದು. ಆದಷ್ಟು ಮೈಯ್ಯೆಲ್ಲ ಕಣ್ಣಾಗಿರಿ. ಮಾನ-ಮನಸ್ಸಿಗೆ ಭಂಗ ಉಂಟಾಗಬಹುದು. ಹೊಸ ವ್ಯಕ್ತಿಗಳ ಪರಿಚಯವಾಗಬಹುದು. ರಾಘವೇಂದ್ರ ಶತನಾಮಾವಳಿ ಹೇಳಿ. 

ಕುಂಭ(Aquarius): ತರಾತುರಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ಕೌಟುಂಬಿಕವಾಗಿ ಕಿರಿಕಿರಿಗಳು ತಪ್ಪಲಾರವು. ಉದ್ಯೋಗ ವ್ಯವಹಾರದಲ್ಲಿಯೂ ಸಹ, ಅನೇಕ ರೀತಿಯ ಕೆಲಸಗಳ ಜವಾಬ್ದಾರಿ ನಿಮ್ಮ ಮೇಲೆ ಬೀಳಲಿವೆ. ಆರೋಗ್ಯ ಚೆನ್ನಾಗಿರಲಿದೆ. ಹತ್ತಿರದ ದೇವಾಲಯಕ್ಕೆ ಭೇಟಿ ನೀಡಿ. 

ಮೀನ(Pisces): ರಾಜಕೀಯ ವರ್ಗದವರಿಗೆ ಸ್ಥಾನಮಾನ ಬಲಪಡಿಸುವ ಅವಕಾಶಗಳು ಒದಗಿ ಬರಲಿವೆ. ಮನೆ ಹಿರಿಯರೊಂದಿಗೆ ಹೆಚ್ಚಿನ ಸಮಯ ಕಳೆಯುವುದರಿಂದ ಆಶೀರ್ವಾದ ಬಲ ಸಿಗಲಿದೆ. ನೆಂಟರಿಷ್ಟರ ಆಗಮನದಿಂದ ಸಂತಸ, ನಿಮ್ಮ ಶ್ರಮ, ಪ್ರಾಮಾಣಿಕತೆಗೆ ತಕ್ಕ ಫಲ ಪ್ರಾಪ್ತಿಯಾಗುವುದು. ಹಕ್ಕಿಗಳಿಗೆ ಧಾನ್ಯ ನೀಡಿ.