ಕರಾವಳಿನ್ನು ಬೆಚ್ಚಿ ಬೀಳಿಸಿದ್ದ ಹರೀಶ್‌ ಪೂಜಾರಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿಗೆ ಕೊಲೆ ಬೆದರಿಕೆ ಎದುರಾಗಿದೆ. ಹರೀಶ್‌ ಪೂಜಾರಿ ಕೊಲೆ ಆರೋಪಿಗಳು ಹಾಗೂ ಅವರ ಬೆಂಬಲಿಗರು ನ್ಯಾಯಾಲಯಕ್ಕೆ ಬಂದು ಸಾಕ್ಷಿ ಹೇಳದಂತೆ ಶಮಿವುಲ್ಲಾ ಅವರಿಗೆ ಜೀವ ಬೆದರಿಕೆ ಒಡ್ಡಲಾಗುತ್ತಿದೆ.

ಮಂಗಳೂರು(ಅ.22): ಬಂಟ್ವಾಳ ನಗರ ಠಾಣೆ ವ್ಯಾಪ್ತಿಯ ನಾವೂರ ಎಂಬಲ್ಲಿ 2015ರಲ್ಲಿ ನಡೆದ ಹರೀಶ್‌ ಪೂಜಾರಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿ ಶಮಿವುಲ್ಲಾ ಎಂಬವರಿಗೆ ಜೀವ ಬೆದರಿಕೆ ಒಡ್ಡಲಾಗಿದ್ದು, ಅವರಿಗೆ ರಕ್ಷಣೆ ನೀಡುವಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಕಾಂಗ್ರೆಸ್‌ ನಿಯೋಗ ಸೋಮವಾರ ಮನವಿ ಸಲ್ಲಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

2015ರ ನವೆಂಬರ್‌ನಲ್ಲಿ ಟಿಪ್ಪು ಸುಲ್ತಾನ್‌ ಜಯಂತಿ ವೇಳೆ ಹರೀಶ್‌ ಪೂಜಾರಿ ಹಾಗೂ ಶಮಿವುಲ್ಲಾ ಬೈಕ್‌ನಲ್ಲಿ ಹೋಗುತ್ತಿದ್ದಾಗ ಹರೀಶ್‌ ಪೂಜಾರಿ ಅವರನ್ನು ಮಾರಕಾಸ್ತ್ರದಿಂದ ಕೊಲೆ ಮಾಡಲಾಗಿತ್ತು. ಘಟನೆ ನಡೆದ ಸಂದರ್ಭ ಜತೆಗೇ ಇದ್ದ ಶಮಿವುಲ್ಲಾ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದಾನೆ. ಪ್ರಕರಣ ಈಗ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ.

ಸಿದ್ದರಾಮಯ್ಯಗೆ ತಲೆ ಸರಿಯಿಲ್ಲ: ಅಶೋಕ್‌

ಆದರೆ ಹರೀಶ್‌ ಪೂಜಾರಿ ಕೊಲೆ ಆರೋಪಿಗಳು ಹಾಗೂ ಅವರ ಬೆಂಬಲಿಗರು ನ್ಯಾಯಾಲಯಕ್ಕೆ ಬಂದು ಸಾಕ್ಷಿ ಹೇಳದಂತೆ ಶಮಿವುಲ್ಲಾ ಅವರಿಗೆ ಜೀವ ಬೆದರಿಕೆ ಒಡ್ಡುತ್ತಿದ್ದಾರೆ. ಪ್ರಕರಣದ ವಿಚಾರಣೆಗೂ ಇದರಿಂದ ಅಡ್ಡಿಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಅವರಿಗೆ ರಕ್ಷಣೆ ಒದಗಿಸಬೇಕು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಒತ್ತಾಯಿಸಿದರು.

ಶಮಿವುಲ್ಲಾ ಅವರಿಗೆ ಯಾವುದೇ ರೀತಿ ತೊಂದರೆಯಾದಲ್ಲಿ ಪೊಲೀಸ್‌ ಇಲಾಖೆ ಹೊಣೆಗಾರರಾಗಿರುತ್ತಾರೆ ಎಂದು ತಿಳಿಸಲಾಯಿತು. ನಿಯೋಗದಲ್ಲಿ ಬಂಟ್ವಾಳ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬೇಬಿ ಕುಂದರ್‌, ಪಾಣೆಮಂಗಳೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸುದೀಪ್‌ ಕುಮಾರ್‌ ಶೆಟ್ಟಿ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಎಂ.ಎಸ್‌. ಮಹಮ್ಮದ್‌, ಪದ್ಮಶೇಖರ್‌ ಜೈನ್‌, ಮಂಜುಳ ಮಾವೆ, ಅನಿತಾ ಹೇಮನಾಥ್‌ ಶೆಟ್ಟಿ, ತಾಲೂಕು ಪಂಚಾಯ್ತಿ ಉಪಾಧ್ಯಕ್ಷ ಅಬ್ಬಾಸ್‌ ಅಲಿ, ಯುವ ಕಾಂಗ್ರೆಸ್‌ ಅಧ್ಯಕ್ಷ ಪ್ರಶಾಂತ್‌ ಕುಲಾಲ್‌, ಪುರಸಭೆ ಸದಸ್ಯರಾದ ಗಂಗಾಧರ ಪೂಜಾರಿ, ಮಾಯಿಲಪ್ಪ ಸಾಲ್ಯನ್‌, ಮಾಜಿ ಬೂಡಾ ಅಧ್ಯಕ್ಷ ಸದಾಶಿವ ಬಂಗೇರ, ಮುಖಂಡರಾದ ಜಗದೀಶ್‌ ಕೊಯಿಲ, ಲೋಕೇಶ್‌ ಸುವರ್ಣ, ನವಾಝ್‌ ಬಡಕಬೈಲು, ಚಂದ್ರಶೇಖರ್‌ ಪೂಜಾರಿ ಬಾಳ್ತಿಲ, ಎ.ಕೆ ಶಾರೂಕ್‌ ಅಹಮ್ಮದ್‌, ವಿಕ್ಟರ್‌ ಪಾಯಸ್‌, ಸದಾನಂದ ಶೆಟ್ಟಿಕಾವಳಕಟ್ಟೆಇದ್ದರು.

ಮಳೆ: ಕರಾವಳಿಯಲ್ಲಿ 27ರ ತನಕ ರೆಡ್‌ ಅಲರ್ಟ್‌...