Asianet Suvarna News Asianet Suvarna News

ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಸಂಚಾರ ಸ್ಥಗಿತ

ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸಂಚಾರ ನಿಷೇಧಿಸಲಾಗಿದೆ. ಕಾರಣ ಏನು ? 

Gas Tanker Leakage in Mangalore Bangalore National Highway
Author
Bengaluru, First Published Nov 4, 2019, 12:30 PM IST

ಮಂಗಳೂರು [ನ.04]:   ತಾಂತ್ರಿಕ ಸಮಸ್ಯೆಯಿಂದ ಗ್ಯಾಸ್ ಟ್ಯಾಂಕರ್ ಸೋರಿಕೆಯಾಗಿರುವ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ. 

ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಕರವೇಲು ಬಳಿ ಇಂದು ಬೆಳಕ್ಕೆ ಗ್ಯಾಸ್ ಟ್ಯಾಂಕರ್ ಸೋರಿಕೆಯಾಗಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ  ವೇಳೆ ಈ ಘಟನೆಯಾಗಿದೆ

ಗ್ಯಾಸ್ ಟ್ಯಾಂಕರ್ ಸೋರಿಕೆಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಈ ಹಿಂದೆಯೂ ಅನೇಕ ಬಾರಿ ಗ್ಯಾಸ್ ಟ್ಯಾಂಕರ್ ಲೀಕೇಜ್‌ನಿಂದ ಹಲವು ರೀತಿಯ ಸಮಸ್ಯೆಗಳು ಉಂಟಾಗಿದ್ದು, ಈ ನಿಟ್ಟಿನಲ್ಲಿ ಇಲ್ಲಿ ಸಂಚಾರ ನಿಷೇಧ ಮಾಡಲಾಗಿದೆ. 

ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.  ಅಲ್ಲದೇ ಸ್ಥಳಕ್ಕೆ MRPL  ತಜ್ಞರೂ ಭೇಟಿ ನೀಡಿ ಪರಿಶೀಲಿಸಿದ್ದಾರೆ. 

Follow Us:
Download App:
  • android
  • ios