Asianet Suvarna News Asianet Suvarna News

ಮಹಿಳೆಯರ ರಕ್ಷಣೆಗೆ ವಾಟ್ಸಾಪ್ ಪಿಂಕ್‌ ಗ್ರೂಪ್‌..!

ನಗರದಲ್ಲಿ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರ ದೂರುಗಳ ಬಗ್ಗೆ ತ್ವರಿತ ಗಮನಹರಿಸಲು ಪಿಂಕ್‌ ಗ್ರೂಪ್‌ ಎಂಬ ವಾಟ್ಸಪ್‌ಗ್ರೂಪ್‌ನ್ನು ರಚಿಸಲಾಗುವುದು ಎಂದು ಪೊಲೀಸ್‌ ಕಮಿಷನರ್‌ ಡಾ.ಪಿ.ಎಸ್‌. ಹರ್ಷ ತಿಳಿಸಿದ್ದಾರೆ. ವಿದ್ಯಾರ್ಥಿನಿಯರ ಸುರಕ್ಷತೆಯ ದೃಷ್ಟಿಅವರ ನೆರವಿಗೆ ಮತ್ತು ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಈ ವಾಟ್ಸ್‌ಆ್ಯಪ್‌ ಗ್ರೂಪ್‌ ರಚಿಸಲಾಗುವುದು ಎಂದಿದ್ದಾರೆ.

Pink whatsapp group for women safety in Mangalore says ips harsha
Author
Bangalore, First Published Oct 11, 2019, 1:18 PM IST

ಮಂಗಳೂರು(ಅ.11): ನಗರದಲ್ಲಿ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರ ದೂರುಗಳ ಬಗ್ಗೆ ತ್ವರಿತ ಗಮನಹರಿಸಲು ಪಿಂಕ್‌ ಗ್ರೂಪ್‌ ಎಂಬ ವಾಟ್ಸಪ್‌ಗ್ರೂಪ್‌ನ್ನು ರಚಿಸಲಾಗುವುದು ಎಂದು ಪೊಲೀಸ್‌ ಕಮಿಷನರ್‌ ಡಾ.ಪಿ.ಎಸ್‌. ಹರ್ಷ ತಿಳಿಸಿದ್ದಾರೆ.

ದ.ಕ. ಕಾರ್ಯನಿರತ ಪತ್ರಕರ್ತರ ಸಂಘ, ದ.ಕ. ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ಹಾಗೂ ದ.ಕ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಬೆಸೆಂಟ್‌ ಮಹಿಳಾ ಕಾಲೇಜ್‌ ಸಹಯೋಗದಲ್ಲಿ ಬ್ರ್ಯಾಂಡ್‌ ಮಂಗಳೂರು ಕಾರ್ಯಕ್ರಮದ ಅಂಗವಾಗಿ ಶಾಲಾ ಕಾಲೇಜುಗಳಲ್ಲಿ ಮಾದಕ ದ್ರವ್ಯ, ಸೈಬರ್‌ ಕ್ರೈಂ ವಿರುದ್ಧ ಅಭಿಯಾನದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಮಂಗಳೂರು: ಈ ಮೀನಿಗೂ, ಕಾರ್ಗಿಲ್‌ ಯುದ್ಧಕ್ಕೂ ಇದೆ ಸಂಬಂಧ

ಮಂಗಳೂರು ಪೊಲೀಸ್‌ ಕಮಿಷನರ್‌ ವ್ಯಾಪ್ತಿಯಲ್ಲಿ ಜನಸ್ನೇಹಿ ಪೊಲೀಸ್‌ ವ್ಯವಸ್ಥೆಯ ಭಾಗವಾಗಿ ‘ಮೈ ಬೀಟ್‌- ಮೈ ಪ್ರೈಡ್‌’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅದೇ ರೀತಿ ಮಹಿಳೆಯರು, ವಿದ್ಯಾರ್ಥಿನಿಯರ ಸುರಕ್ಷತೆಯ ದೃಷ್ಟಿಅವರ ನೆರವಿಗೆ ಮತ್ತು ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಈ ವಾಟ್ಸ್‌ಆ್ಯಪ್‌ ಗ್ರೂಪ್‌ ರಚಿಸಲಾಗುವುದು ಎಂದು ಡಾ.ಹರ್ಷ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಮಾದಕ ದ್ರವ್ಯದ ಚಟಕ್ಕೆ ಬಲಿಯಾಗದಿರಬೇಕಾದರೆ ತಮ್ಮ ಚಟುವಟಿಕೆಗಳನ್ನು ಮನಸ್ಸಿಗೆ ಮುದ ನೀಡುವ ಹವ್ಯಾಸಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಇತ್ತೀಚಿನ ದಿನಗಳಲ್ಲಿ ಸೈಬರ್‌ ಕ್ರೈಂ ಪ್ರಕರಣಗಳು ಹೆಚ್ಚು ತ್ತಿದೆ. ಈ ಬಗ್ಗೆ ಎಚ್ಚರದಿಂದಿರಬೇಕು. ಅಪರಿಚಿತರು ನಮ್ಮ ಮಾಹಿತಿಗಳನ್ನು ಪಡೆದುಕೊಂಡು ನಮಗೆ ವಂಚಿಸುವ ಸಾಧ್ಯತೆಗಳ ಎಚ್ಚರ ವಹಿಸಬೇಕಾದ ಅಗತ್ಯವಿದೆ ಎಂದರು.

ಕಾಸರಗೋಡಿನಲ್ಲಿ ಕನ್ನಡ ಶಾಲೆಗಳಿಗೆ ಮತ್ತೆ ಮಲಯಾಳಂ ಶಿಕ್ಷಕರು

ವಿದ್ಯಾರ್ಥಿಗಳು ಸಂವಾದಗೋಷ್ಠಿ ವಿದ್ಯಾರ್ಥಿನಿಯರ ಪ್ರಶ್ನೆಗಳಿಗೆ ಉತ್ತರಿಸುತ್ತಾ, ಮಾದಕವ್ಯಸನಕ್ಕೆ ಬಲಿಯಾದವರನ್ನು ಹೊರತರುವುದಕ್ಕೆ ಆಪ್ತ ಸಲಹೆ, ಕೆಲವೊಮ್ಮೆ ಅಮಲು ವ್ಯಸನದಿಂದ ಹೊರಬರಲು ಚಿಕಿತ್ಸೆಯ ಅಗತ್ಯವೂ ಕಂಡುಬರಬಹುದು ಎಂದಿದ್ದಾರೆ.

ಪ್ರಸಿದ್ಧ ಸ್ಯಾಕ್ಸೊಫೋನ್ ವಾದಕ ಕದ್ರಿ ಗೋಪಾಲನಾಥ್ ನಿಧನ

ಸಮಾಜದಲ್ಲಿ ಅಪರಾಧಗಳನ್ನು ತಡೆಯಲು ಜವಾಬ್ದಾರಿಯುತ ನಾಗರಿಕಕರ ಪಾತ್ರವೂ ಮುಖ್ಯ. ಅಪರಾಧ ಸಂಭವಿಸಿದ ತಕ್ಷಣ ಈ ಬಗ್ಗೆ ಪೊಲೀಸರಿಗೆ ತಿಳಿಸಿ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸರಿಗೆ ಮಾಹಿತಿ ನೀಡಿದಂತಾಗುತ್ತದೆ. ಅದಕ್ಕಾಗಿ ತುರ್ತು ಕರೆ, ವಾಟ್ಸ್‌ಆ್ಯಪ್‌, ಇ ಮೇಲ್‌ಗಳನ್ನು ಬಳಸಬಹುದು ಎಂದು ಪೊಲೀಸ್‌ ಕಮೀಷನರ್‌ ಡಾ. ಹರ್ಷ ತಿಳಿಸಿದ್ದಾರೆ.

ಆಕಾಶವಾಣಿಯ ರವೀಂದ್ರಕುಮಾರ್‌ ಇನ್ನಿಲ್ಲ

ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್‌ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಬೆಸೆಂಟ್‌ ಶಿಕ್ಷಣ ಸಂಸ್ಥೆಗಳ ಸಂಚಾಲಕ ದೇವಾನಂದ ಪೈ, ಕಾಲೇಜಿನ ಪ್ರಾಂಶುಪಾಲ ಸತೀಶ್‌ ಕುಮಾರ್‌ ಶೆಟ್ಟಿಇದ್ದರು.

Follow Us:
Download App:
  • android
  • ios