ನ.12ರಂದು ಪಾಲಿಕೆ ಚುನಾವಣೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಚುನಾವಣಾ ಕರ್ತವ್ಯಕ್ಕೆ ಬಸ್ಗಳನ್ನು ನಿಯೋಜಿಸಲಾಗಿದೆ. ಸಾರ್ವಜನಿಕ ಪ್ರಯಾಣಿಕರಿಗೆ ತೊಂದರೆಯಾಗದಂತೆ ಸಾರಿಗೆ ಕಾರ್ಯಾಚರಣೆಗೊಳಿಸಲು ಮುತುವರ್ಜಿ ವಹಿಸಲಾಗಿದೆ.
ಮಂಗಳೂರು(ನ.11): ನ.12ರಂದು ಪಾಲಿಕೆ ಚುನಾವಣೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಚುನಾವಣಾ ಕರ್ತವ್ಯಕ್ಕೆ ಬಸ್ಗಳನ್ನು ನಿಯೋಜಿಸಲಾಗಿದೆ. ಸಾರ್ವಜನಿಕ ಪ್ರಯಾಣಿಕರಿಗೆ ತೊಂದರೆಯಾಗದಂತೆ ಸಾರಿಗೆ ಕಾರ್ಯಾಚರಣೆಗೊಳಿಸಲು ಮುತುವರ್ಜಿ ವಹಿಸಲಾಗಿದೆ.
Add Asianetnews Kannada as a Preferred Source

ನ.12ರಂದು ನಡೆಯಲಿರುವ ಮಹಾನಗರ ಪಾಲಿಕೆ ಚುನಾವಣೆ ಕಾರ್ಯಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಒಪ್ಪಂದದ ಮೇರೆಗೆ ವಾಹನಗಳನ್ನು ನೀಡಲಾಗುವ ಹಿನ್ನಲೆಯಲ್ಲಿ ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡು ವಲಯಗಳಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ತೊಂದರೆಯಾಗದಂತೆ ಸಾರಿಗೆ ಕಾರ್ಯಾಚರಣೆಗೊಳಿಸಲು ಮುತುವರ್ಜಿ ವಹಿಸಲಾಗಿದೆ.
ಈ ಮಾರ್ಗಗಳಲ್ಲಿ ನ.11 ಮತ್ತು 12ರಂದು ವಾಹನಗಳ/ಸಾರಿಗೆಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗುವ ಸಂಭವವಿದ್ದು, ಸಾರ್ವಜನಿಕ ಪ್ರಯಾಣಿಕರು ನಿಗಮದೊಂದಿಗೆ ಸಹಕರಿಸುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
