Asianet Suvarna News Asianet Suvarna News

ತುಳುನಾಡಿನ ಧರ್ಮ ದಂಗಲ್ ಮಧ್ಯೆಯೂ ಮಸೀದಿಗೆ ದೈವಗಳ ಭೇಟಿ!

ಧಾರ್ಮಿಕ ಸಂಘರ್ಷದ ನಡುವೆಯೂ ತುಳುವರ ಆರಾಧ್ಯ ದೈವಗಳು  ಮಸೀದಿಗೆ   ಭೇಟಿ ನೀಡಿ ಮುಸ್ಲಿಂ  ಬಾಂಧವರನ್ನ ಸಾಂಪ್ರದಾಯಿಕವಾಗಿ ಜಾತ್ರೋತ್ಸವಕ್ಕೆ ಆಹ್ವಾನಿಸಿದೆ.   

Sri Udyavara Arasumanjushnath Daivasthana Annual Fest Invitation to Masjid gow
Author
Bengaluru, First Published Apr 23, 2022, 11:32 AM IST

ವರದಿ: ಭರತ್ ರಾಜ್, ಏಷ್ಯಾನೆಟ್ ಸುವರ್ಣ ನ್ಯೂಸ್

ಮಂಗಳೂರು(ಏ.23): ಕರಾವಳಿಯ ಹಿಂದೂ-ಮುಸ್ಲಿಂ (Hindu muslim) ಧರ್ಮ ದಂಗಲ್ (dharma dangal) ಮಧ್ಯೆಯೂ ತುಳುನಾಡಿನಲ್ಲಿ (Tulunadu) ಭಾವೈಕ್ಯತೆಯ ಸಂಪ್ರದಾಯವೊಂದು ಮುಂದುವರೆದಿದೆ. ಧಾರ್ಮಿಕ ಸಂಘರ್ಷದ ನಡುವೆಯೂ ತುಳುವರ ಆರಾಧ್ಯ ದೈವಗಳು (Daivaradhane) ಮಸೀದಿಗೆ (Masjid) ಭೇಟಿ ನೀಡಿ ಮುಸ್ಲಿಂ (Muslim) ಬಾಂಧವರನ್ನ ಸಾಂಪ್ರದಾಯಿಕವಾಗಿ ಜಾತ್ರೋತ್ಸವಕ್ಕೆ ಆಹ್ವಾನಿಸಿದೆ. 

ತುಳುನಾಡಿನ ಗಡಿನಾಡಿನಲ್ಲಿ ಸಾಂಪ್ರದಾಯಿಕ ಆಚರಣೆಯಲ್ಲಿ (Traditional ritual) ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ಮಂಗಳೂರಿನ ಕರ್ನಾಟಕ-ಕೇರಳ ಗಡಿ ಭಾಗದ ಉದ್ಯಾವರ ಅರಸು ಮಂಜಿಷ್ಣಾರ್‌ ಕ್ಷೇತ್ರದ (Sri Udyavara Arasumanjushnath Daivasthana) ಜಾತ್ರೆಯ ಪೂರ್ವಭಾವಿಯಾಗಿ ಉದ್ಯಾವರ ಸಾವಿರ ಜಮಾಅತ್‌ ಮಸೀದಿಗೆ (Jumma Masjid) ದೈವಗಳ ಭೇಟಿ ವಾಡಿಕೆ. ಹಿಂದೂ ಮುಸ್ಲಿಂ ಭಾವೈಕ್ಯದ ಸಂಕೇತದೊಂದಿಗೆ ಕಳೆದ 800 ವರ್ಷಗಳಿಂದ ವಾಡಿಕೆಯಲ್ಲಿರುವ ಸಂಪ್ರದಾಯದಂತೆ ಅರಸು ದೈವ ಪಾತ್ರಿಗಳು ಮತ್ತು ದೇವಸ್ಥಾನದ ಪ್ರತಿನಿಧಿಗಳು ಹಾಗೂ ಸಹಸ್ರಾರು ಹಿಂದೂ ಬಾಂಧವರು ಮಸೀದಿಗೆ ಭೇಟಿ ನೀಡಿದ್ದಾರೆ. 

ಶೀಘ್ರವೇ 2 ಸಾವಿರಕ್ಕೂ ಹೆಚ್ಚು KSP CONSTABLE RECRUITMENT: ಪ್ರವೀಣ್ ಸೂದ್ 

ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಪ್ರಾಚೀನ ಕಾಲದಿಂದಲೇ ಆಚರಿಸಿಕೊಂಡು ಬಂದಿರುವ ಸಂಪ್ರದಾಯ ಇದಾಗಿದ್ದು, ಉದ್ಯಾವರ ಕ್ಷೇತ್ರದ ಭಂಡಾರ ಮನೆಯಿಂದ ಹೊರಟ ದೈವಗಳು ಮಸೀದಿ ಭೇಟಿ ಮಾಡಿವೆ. ಮಸೀದಿಯ ಆಡಳಿತ ಸಮಿತಿ ಪ್ರತಿನಿಧಿಗಳು ಹಾಗೂ ಸಹಸ್ರಾರು ಮುಸ್ಲಿಂ ಬಾಂಧವರು ಪರಂಪರಾಗತ ರೀತಿಯಲ್ಲಿ ಉದ್ಯಾವರ ಅರಸು ದೈವ ಪಾತ್ರಿಗಳಿಗೆ ಅದ್ದೂರಿ ಸ್ವಾಗತ ಕೋರಿದ್ದಾರೆ.

ಜಮಾಅತ್‌ನೊಳಗೆ ಪ್ರವೇಶಿಸಿದ ದೈವ ಪಾತ್ರಿಗಳು (monk) ಮುಸ್ಲಿಂ ಬಾಂಧವರಿಗೆ ಜಾತ್ರೋತ್ಸವಕ್ಕೆ ಆಹ್ವಾನ ನೀಡಿದ್ದಾರೆ‌. ಮೇ 9ರಿಂದ 15ರ ತನಕ ಮಾಡ ಕ್ಷೇತ್ರದ ಉತ್ಸವಕ್ಕೆ ಸಾವಿರ ಜಮಾಅತ್‌ ಗೆ ಆಹ್ವಾನ ನೀಡಲಾಗಿದೆ. ನೇಮೋತ್ಸವದ ದಿನ ಜಮಾಅತ್‌ನ ಮುಖ್ಯಸ್ಥರಿಗೆ ಕೂರಲು ದೇವಸ್ಥಾನದ ಕಟ್ಟೆಯಲ್ಲಿ ವಿಶೇಷವಾದ ಸ್ಥಳವನ್ನು ಕೂಡ ನೀಡಲಾಗುತ್ತದೆ. ದೈವಗಳು ಆಶೀರ್ವದಿಸಿದ ಮಲ್ಲಿಗೆ ಹೂವುಗಳನ್ನು ಜಮಾಅತ್‌ನವರಿಗೆ ನೀಡುವುದು ಕೂಡ ಇಲ್ಲಿನ ಸಂಪ್ರದಾಯ.‌ ಕರಾವಳಿಯಲ್ಲಿ ಧರ್ಮದಂಗಲ್ ಮುಂದುವರೆದರೂ ತುಳು ಭಾಷಿಗರೇ ಹೆಚ್ಚಾಗಿರುವ ಗಡಿ ಭಾಗದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆ ಮುಂದುವರೆದಿದೆ.

ಪ್ರಯಾಣಿಕರ ಗಮನಕ್ಕೆ: ಇಂದು ರಾತ್ರಿ ಬೈಯ್ಯಪ್ಪನಹಳ್ಳಿ-ಎಂ.ಜಿ.ರಸ್ತೆ ಮೆಟ್ರೋ ಓಡಲ್ಲ

Follow Us:
Download App:
  • android
  • ios