Asianet Suvarna News Asianet Suvarna News

ಟ್ರಾಫಿಕ್ ನಿಯಮ ಉಲ್ಲಂಘಿಸಿದರೆ ವಾಹನ ಸೀಜ್ ಮಾಡಿ ಗುಜುರಿಗೆ, ಹೊಸ ರೂಲ್ಸ್ ಎಚ್ಚರ!

ಹೆಲ್ಮೆಟ್, ಸಿಗ್ನಲ್ ಜಂಪ್, ರಾಂಗ್ ಸೈಡ್ ಸೇರಿದಂತೆ ಯಾವುದೇ ಟ್ರಾಫಿಕ್ ನಿಯಮ ಉಲ್ಲಂಘಿಸಿದರೆ ಜೋಕೆ. ಹೊಸ ನಿಯಮದ ಜಾರಿಗೆ ಬರುತ್ತಿದೆ. ನಿಯಮ ಉಲ್ಲಂಘಿಸಿದ ವಾಹನ ಸೀಜ್ ಮಾಡಿ ಗುಜುರಿಗೆ ಹಾಕಲಾಗುತ್ತದೆ. ಕರ್ನಾಟಕ ಸಾರಿಗೆ ಇಲಾಖೆ ಹೊಸ ನಿಯಮ ತರಲು ಸಜ್ಜಾಗಿದೆ.

Karnataka Transport dept Submit proposal of Vehicle seize and scrap rule for Traffic rules violators ckm
Author
First Published Feb 25, 2024, 8:57 PM IST

ಬೆಂಗಳೂರು(ಫೆ.25) ಪದೇ ಪದೇ ಟ್ರಾಫಿಕ್ ನಿಯಮ ಬ್ರೇಕ್ ಮಾಡುತ್ತೀರಾ?  ಹಾಗಾದರೆ ಇನ್ನು ಮುಂದೆ ಎಚ್ಚರವಹಿಸುವುದು ಅತೀ ಅಗತ್ಯ ಕಾರಣ. ಕೇವಲ ದಂಡ ಕಟ್ಟಿದರೆ ನಿಯಮ ಉಲ್ಲಂಘನೆ ಕೇಸ್ ಮುಗಿಯುವುದಿಲ್ಲ. ನಿಮ್ಮ ವಾಹನ ಸೀಜ್ ಮಾಡಿ ಗುಜುರಿಗೆ ಹಾಕಲಾಗುತ್ತದೆ. ಈ ಹೊಸ ನಿಯಮವನ್ನು ಕರ್ನಾಟಕ ಸಾರಿಗೆ ಇಲಾಖೆ ರೂಪಿಸಿದೆ. ಇದೀಗ ಈ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ.

ಬೆಂಗಳೂರು ಸೇರಿದಂತೆ ಇತರ ನಗರ, ಪಟ್ಟಣಗಳಲ್ಲಿ ವಾಹನ ಸವಾರರು ನಿಮಯ ಉಲ್ಲಂಘನೆ ಪ್ರಕರಣಗಳು ಹೆಚ್ಚಾಗುತ್ತಿದೆ. ಪೊಲೀಸರು ಇಲ್ಲ ಎಂದು ಸಿಗ್ನಲ್ ಜಂಪ್, ರಾಂಗ್ ಸೈಡ್, ಸೀಟ್ ಬೆಲ್ಟ್ ಸೇರಿದಂತೆ ಹಲವು ಟ್ರಾಫಿಕ್ ನಿಯಮ ಉಲ್ಲಂಘಿಸುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತೀಚೆಗೆ 30 ಸಾವಿರ,50 ಸಾವಿರ, 1 ಲಕ್ಷ ರೂಪಾಯಿ ದಂಡ ಬಾಕಿ ಉಳಿಸಿಕೊಂಡ ಘಟನೆಗಳು ಬೆಳಕಿಗೆ ಬಂದಿದೆ. ವಾಹನ ಮೌಲ್ಯವೇ ದಂಡದಷ್ಟಿಲ್ಲ ಎಂದು ಅಳಲು ತೋಡಿಕೊಂಡ ಘಟನೆಗಳು ವರದಿಯಾಗಿದೆ.

ಪದೇಪದೆ ರೂಲ್ಸ್ ಬ್ರೇಕ್ ಮಾಡ್ತಿದ್ದ ವಾಹನ ಸವಾರರಿಗೆ ಬಿಗ್ ಶಾಕ್; ₹50,000+ ದಂಡ ಬಾಕಿ ಇದ್ದ 85 ವಾಹನ ಜಪ್ತಿ!

ಈ ಸಮಸ್ಯೆಗಳಿಗೆ ಉತ್ತರ ಹುಡುಕಲು ಸಾರಿಗೆ ಇಲಾಖೆ ಹೊಸ ಸೂತ್ರ ಮುಂದಿಟ್ಟಿದೆ. ಮೊದಲ ಹಂತದಲ್ಲಿ 50 ಸಾವಿರ ರೂಪಾಯಿಗೂ ಅಧಿಕ ಮೊತ್ತದ ದಂಡ ಬಾಕಿ ಉಳಿಸಿಕೊಂಡ ವಾಹನಗಳನ್ನು ಸೀಜ್ ಮಾಡಿ ಗುಜುರಿಗೆ ಹಾಕುವ ಹೊಸ ನಿಯಮ ಜಾರಿಗೆ ತರಲು ಕರ್ನಾಟಕ ಮುಂದಾಗಿದೆ. ಇದುವರೆಗೆ ದುಬಾರಿ ದಂಡ ಕಟ್ಟದ ವಾಹನಗಳನ್ನು ಜಪ್ತಿ ಮಾಡಿ ಪೊಲೀಸ್ ಠಾಣೆಯಲ್ಲಿ ಇಡಲಾಗುತ್ತಿತ್ತು. ದಂಡ ಕಟ್ಟಿದ ಬಳಿಕ ವಾಹನ ಮರಳಿ ನೀಡಲಾಗುತ್ತದೆ. 

ಹೊಸ ನಿಯಮದ ಪ್ರಕಾರ, ದುಬಾರಿ ದಂಡ ಪಾವತಿ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದು ಗುಜುರಿಗೆ ಹಾಕಲಾಗುತ್ತದೆ. ಈ ಪ್ರಸ್ತಾವನೆಯನ್ನು ಸಾರಿಗೆ ಇಲಾಖೆ ಸರ್ಕಾರಕ್ಕೆ ಸಲ್ಲಿಸಿದೆ. ಸರ್ಕಾರ ಈ ಪ್ರಸ್ತಾವನೆಯನ್ನು ಪರಿಶೀಲಿಸಲು ಮುಂದಾಗಿದೆ. ಸಾರಿಗೆ ಇಲಾಖೆ ಈ ಪ್ರಸ್ತಾವನೆಯನ್ನು ಸರ್ಕಾರ ಒಪ್ಪಿಕೊಂಡರೆ ಹೊಸ ಕಾನೂನು ಜಾರಿಗೆ ಬಲಿದೆ.

30,000 ಮೌಲ್ಯದ ಸ್ಕೂಟರ್‌ಗೆ 3.2 ಲಕ್ಷ ರೂ ಟ್ರಾಫಿಕ್ ದಂಡ, ವಿನಾಯಿತಿ ಕೇಳಿದ ಬೆಂಗಳೂರಿಗನಿಗೆ ವಾರ್ನಿಂಗ್!

ನಗರ ಪ್ರದೇಶದಲ್ಲಿ ಹಾಗೂ ಹೆದ್ದಾರಿಗಳಲ್ಲಿ ಸಂಭವಿಸುತ್ತಿರುವ ಅಪಘಾತ ಪ್ರಮಾಣದಲ್ಲಿ ಟ್ರಾಫಿಕ್ ನಿಯಮ ಪಾಲಿಸದೆ ನಡೆಯುತ್ತಿರುವ ಅಪಘಾತಗಳ ಸಂಖ್ಯೆ ಹೆಚ್ಚಿದೆ.  ಸುರಕ್ಷತೆ, ಸುಗಮ ಸಂಚಾರಕ್ಕಾಗಿ ಇದೀಗ ಕಟ್ಟು ನಿಟ್ಟಿನ ಟ್ರಾಫಿಕ್ ನಿಯಮ ಪಾಲನೆಗೆ ಹೊಸ ನಿಯಮ ಜಾರಿಗೆ ಸಾರಿಗೆ ಇಲಾಖೆ ತಯಾರಿ ನಡೆಸಿದೆ.
 

Follow Us:
Download App:
  • android
  • ios