ಸಿಎಂ ಆದ ಬಳಿಕ ಮೊದಲ ಬಾರಿ ಶೃಂಗೇರಿ ಮಠಕ್ಕೆ ಸಿದ್ದರಾಮಯ್ಯ ಭೇಟಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯೊಂದಿಗೆ ಶೃಂಗೇರಿ ಮಠಕ್ಕೆ ತೆರಳಿದ್ದಾರೆ.
ಚಿಕ್ಕಮಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯೊಂದಿಗೆ ಶೃಂಗೇರಿ ಮಠಕ್ಕೆ ತೆರಳಿದ್ದಾರೆ. ಸಿಎಂ ಆದ ಬಳಿಕ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಶೃಂಗೇರಿಗೆ ತೆರಳಿದ್ದಾರೆ.
ಈ ಹಿಂದೆ 2 ಬಾರಿ ಕೊಪ್ಪ, ಎನ್ಆರ್ ಪುರಕ್ಕೆ ಆಗಮಿಸಿದ್ದರೂ ಕೂಡ ಶೃಂಗೇರಿ ಮಠಕ್ಕೆ ಭೇಟಿ ನೀಡಿರಲಿಲ್ಲ.
ಇದರಿಂದ ಅನೇಕ ಬಾರಿ ಸಿಎಂ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದರು. ಆದರೆ ರಾಹುಲ್ ಗಾಂಧಿಯೊಂದಿಗೆ ಇಂದು ಶೃಂಗೇರಿ ಮಠಕ್ಕೆ ಭೇಟಿ ನೀಡಿದ್ದಾರೆ.