ಕಾಂಗ್ರೆಸ್ ಶಾಸಕನ ಪುತ್ರನ ಗೂಂಡಾಗಿರಿ ಭಾರಿ ಸುದ್ದಿ ಮಾಡುತ್ತಿದ್ದಂತೆ ಇದೀಗ ಇದೇ ರೀತಿಯ ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ.

ಬೆಂಗಳೂರು : ಕಾಂಗ್ರೆಸ್ ಶಾಸಕನ ಪುತ್ರನ ಗೂಂಡಾಗಿರಿ ಭಾರಿ ಸುದ್ದಿ ಮಾಡುತ್ತಿದ್ದಂತೆ ಇದೀಗ ಇದೇ ರೀತಿಯ ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ.

Add Asianetnews Kannada as a Preferred SourcegooglePreferred

ಬಿಬಿಎಂಪಿ ಕಚೇರಿಯಲ್ಲಿ ಶಾಸಕ ಭೈರತಿ ಬಸವರಾಜು ಆಪ್ತ ನಾರಾಯಣ ಸ್ವಾಮಿ ಗೂಂಡಾಗಿರಿ ನಡೆಸಿದ್ದಾರೆ. ಪೆಟ್ರೋಲ್ ಸುರಿದು ಸರ್ಕಾರಿ ಕಚೇರಿಗೆ ಬೆಂಕಿ ಹಚ್ಚಲು ಆತ ಮುಂದಾಗಿದ್ದಾರೆ.

 ಪಾಲಿಕೆ ಕಚೇರಿಗೆ ನುಗ್ಗಿದ ವ್ಯಕ್ತಿ ಖಾತೆ ಹಂಚಿಕೆ ಮಾಡಿಕೊಡದಿದ್ದರೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಒಡ್ಡಿ ದರ್ಪ ಮೆರೆದಿದ್ದಾನೆ. ಹೊರಮಾವಿನಲ್ಲಿರುವ ಬಿಬಿಎಂಪಿ ಕಚೇರಿಯಲ್ಲಿ ಈತ ಗೂಂಡಾಗಿರಿ ತೋರಿಸಿದ್ದಾನೆ ಎನ್ನಲಾಗಿದೆ.