ಮ್ಯಾನ್ ಹೋಲ್'ಗೆ ಇಳಿದಿದ್ದ ಕಾರ್ಮಿಕ ಸಾವು
ಮ್ಯಾನ್ಹೋಲ್ಗೆ ಇಳಿದಿದ್ದ ಒಬ್ಬ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೊಬ್ಬ ಕಾರ್ಮಿಕನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರು (ಅ.18): ಮ್ಯಾನ್ಹೋಲ್ಗೆ ಇಳಿದಿದ್ದ ಒಬ್ಬ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೊಬ್ಬ ಕಾರ್ಮಿಕನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ತುಮಕೂರು ರಸ್ತೆಯ ಶಾಂತಿನಿಕೇತನ ಅಪಾರ್ಟ್ಮೆಂಟ್ ಬಳಿ ಘಟನೆ ನಡೆದಿದೆ. ವೆಂಕಟೇಶ್ (34) ಮೃತ ಕಾರ್ಮಿಕ.
ಮ್ಯಾನ್ಹೋಲ್ ಸ್ವಚ್ಛಗೊಳಿಸಲು ಇಳಿದಿದ್ದ ವೇಳೆ ಉಸಿರುಗಟ್ಟಿ ವೆಂಕಟೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.