ಸರಕಾರಿ ಶಾಲೆಗಳ ಬಿಸಿಯೂಟ ಕಾರ್ಯಕರ್ತರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟಿಸುತ್ತಿದ್ದು, ನಾಳೆ ಇದು ತೀವ್ರಗೊಳ್ಳಲಿದೆ. ರಾಜ್ಯದೆಲ್ಲೆಡೆಯಿಂದ ಕಾರ್ಯಕರ್ತರು ನಗರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಸಂಚಾರ ವ್ಯವಸ್ಥೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.

ಬೆಂಗಳೂರು: ಸರಕಾರಿ ಶಾಲೆಗಳ ಬಿಸಿಯೂಟ ಕಾರ್ಯಕರ್ತರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟಿಸುತ್ತಿದ್ದು, ನಾಳೆ ಇದು ತೀವ್ರಗೊಳ್ಳಲಿದೆ. ರಾಜ್ಯದೆಲ್ಲೆಡೆಯಿಂದ ಕಾರ್ಯಕರ್ತರು ನಗರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಸಂಚಾರ ವ್ಯವಸ್ಥೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.

Add Asianetnews Kannada as a Preferred SourcegooglePreferred

ಸಾವಿರಾರು ಸಂಖ್ಯೆಯಲ್ಲಿ ಸೇರುತ್ತಿರುವ ಕಾರ್ಯಕರ್ತರು ವಿಧಾನಸೌಧ ಚಲೆೋ ನಡೆಸಲಿದ್ದು, ಸಿಐಟಿಯು ಸಂಘಟನೆಯ ಅಧ್ಯಕ್ಷೆ ವರಲಕ್ಷ್ಮಿ ನೇತೃತ್ವದಲ್ಲಿ ವಿಧಾನಸೌಧವನ್ನು ಮುತ್ತಿಗೆ ಹಾಕಲಾಗುತ್ತಿದೆ. ವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಈ ಕಾರ್ಯಕರ್ತರು ವಿಧಾನಸೌಧದವರೆಗೆ ಬೆಳಗ್ಗೆ 10.30ಕ್ಕೆ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದು, ಈ ಸಮಯದಲ್ಲಿ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.

ಅಲ್ಲದೇ, ನಾಳೆ ಸರಕಾರಿ ಶಾಲೆಗಳಲ್ಲಿ ಬಿಸಿಯೂಟವೂ ಬಂದ್ ಆಗಲಿದೆ.