ರಾಹುಲ್ ಗಾಂಧಿ ಚಿಕ್ಕಮಗಳೂರು ಪ್ರವಾಸ ಕೈಗೊಳ್ಳುತ್ತಿದ್ದು,  ಈ ವೇಳೆ ರೋಡ್ ಶೋ ನಡೆಸಲು ಚಿಕ್ಕಮಗಳೂರು ಪೊಲೀಸರು ನಿರಾಕರಿಸಿದ್ದಾರೆ.

ಚಿಕ್ಕಮಗಳೂರು : ರಾಹುಲ್ ಗಾಂಧಿ ಚಿಕ್ಕಮಗಳೂರು ಪ್ರವಾಸ ಕೈಗೊಳ್ಳುತ್ತಿದ್ದು, ಈ ವೇಳೆ ರೋಡ್ ಶೋ ನಡೆಸಲು ಚಿಕ್ಕಮಗಳೂರು ಪೊಲೀಸರು ನಿರಾಕರಿಸಿದ್ದಾರೆ.

ನಕ್ಸಲ್ ಪೀಡಿತ ಪ್ರದೇಶವಾಗಿರುವುದರಿಂದ ರೋಡ್ ಶೋ ಮಾಡದಂತೆ ಅನುಮತಿ ನಿರಾಕರಣೆ ಮಾಡಿದ್ದಾರೆ. ಆದರೆ ರಸ್ತೆ ಸಂಚಾರಕ್ಕೆ ಅನುಮತಿ ನೀಡಿದ್ದಾರೆ. ಭದ್ರತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಇದೇ 21 ರಂದು ರಾಹುಲ್ ಗಾಂಧಿ ಶೃಂಗೇರಿಗೆ ಭೇಟಿ ನೀಡುತ್ತಿದ್ದು, ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಶೃಂಗೇರಿಯಿಂದ ಚಿಕ್ಕಮಗಳೂರಿನವರೆಗೂ ಕೂಡ ಸೂಕ್ತ ಪರಿಶೀಲನೆ ನಡೆಸಲಾಗಿದೆ.