- ಉದ್ಯಾನವನಕ್ಕೆ ಮೀಸಲಿಟ್ಟ ಜಾಗವನ್ನು ಡಿನೋಟಿಫೈ ಮಾಡಿದ ಸಿಎಂ- ಬಿಜೆಪಿ ಮುಖಂಡನಿಂದ ಸಿಎಂ ವಿರುದ್ಧ ಆರೋಪ
ಬೆಂಗಳೂರು: ಹಿಂದೆ ಮೈಸೂರು ಅರಸರು ಉದ್ಯಾನವನಕ್ಕೆ ಮೀಸಲಿಟ್ಟ ಜಾಗವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಡಿನೋಟಿಫೈ ಮಾಡಿದ್ದಾರೆ, ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ ಅವರು ಆರೋಪಿಸಿದ್ದಾರೆ.
Add Asianetnews Kannada as a Preferred Source

ಮೂರು ಎಕರೆ 39 ಗುಂಟೆ ಜಾಗವನ್ನು ಮುಖ್ಯಮಂತ್ರಿ ಡಿನೋಟಿಫೈ ಮಾಡಿದ್ದಾರೆ, ಎಂದರು.
ಜಗದೀಶ್ ಶೆಟ್ಟರ್ ಅವರ ಸರ್ಕಾರ ಇದ್ದಾಗಲೂ ಈ ಜಾಗವನ್ನು ಡಿನೋಟಿಫೈ ಮಾಡಲು ಆಗ್ರಹಿಸಿ ಅರ್ಜಿ ಬಂದಿತ್ತು, ಆದರೆ, ಶೆಟ್ಟರ್ ಅವರು ಅದನ್ನು ಒಪ್ಪಲಿಲ್ಲ. ಇದೀಗ ಸಿಎಂ ಸಿದ್ದರಾಮಯ್ಯ ಅವರು ಉದ್ಯಾನವನ, ಸಾರ್ವಜನಿಕ ಅನುಕೂಲಕ್ಕೆ ಮೀಸಲಿಟ್ಟು ಜಾಗವನ್ನು ಡಿನೋಟಿಫಿಕೇಶನ್ ಮಾಡಿದ್ದು, ಕೋಟ್ಯಾಂತರ ರುಪಾಯಿ ಅವ್ಯವಹಾರ ನಡೆದಿದೆ, ಎಂದು ಆರೋಪಿಸಿದ್ದಾರೆ.
