ಎಲ್ಲಿಯೇ ಆತ್ಮಹತ್ಯೆ ಹಾಗೂ ಕೊಲೆ ಪ್ರಕರಣಗಳಾದರೂ, ಧ್ವನಿ ಎತ್ತುವ ಚಿಕ್ಕಮಗಳೂರು, ಉಡುಪಿ ಸಂಸದೆ ಶೋಭಾ ಕರಂದ್ಲಾಜೆ, ತಮ್ಮದೇ ಕ್ಷೇತ್ರದಲ್ಲಿ ನಡೆದ ಧನ್ಯಶ್ರಿ ಆತ್ಮಹತ್ಯೆ ವಿಷಯದಲ್ಲಿ ಮಾತ್ರ ಮೌನ ವಹಿಸಿದ್ದಾರೆ. ಇದಕ್ಕೆ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗಿದೆ.

ಚಿಕ್ಕಮಗಳೂರು: ಎಲ್ಲಿಯೇ ಆತ್ಮಹತ್ಯೆ ಹಾಗೂ ಕೊಲೆ ಪ್ರಕರಣಗಳಾದರೂ, ಧ್ವನಿ ಎತ್ತುವ ಚಿಕ್ಕಮಗಳೂರು, ಉಡುಪಿ ಸಂಸದೆ ಶೋಭಾ ಕರಂದ್ಲಾಜೆ, ತಮ್ಮದೇ ಕ್ಷೇತ್ರದಲ್ಲಿ ನಡೆದ ಧನ್ಯಶ್ರಿ ಆತ್ಮಹತ್ಯೆ ವಿಷಯದಲ್ಲಿ ಮಾತ್ರ ಮೌನ ವಹಿಸಿದ್ದಾರೆ. ಇದಕ್ಕೆ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗಿದೆ.

Add Asianetnews Kannada as a Preferred SourcegooglePreferred

ಹಿಂದೂ ಸಂಘಟನೆಗಳ ನೈತಿಕ ಪೊಲೀಸ್‌ಗಿರಿಗೆ ಬೆದರಿ, ಆತ್ಮಹತ್ಯೆ ಮಾಡಿಕೊಂಡಿರುವ ಧನ್ಯಶ್ರೀ ಸಾವಿಗೆ ಬೆದರಿಕೆ ಕರೆಗಳೇ ಕಾರಣವೆನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಘಟನೆಗೆ ಸಂಬಂಧಿಸಿದಂತೆ ಶೋಭಾ ಸೇರಿ ಹಲವು ಬಿಜೆಪಿ ಮುಖಂಡರು ಉತ್ತರಿಸಬೇಕೆಂದು ನಾಗರಿಕರು ಹಾಗೂ ಪ್ರತಿಪಕ್ಷಗಳ ಸ್ಥಳೀಯ ಮುಖಂಡರು ಆಗ್ರಹಿಸುತ್ತಿದ್ದಾರೆ. ಆದರೆ, ಶೋಭಾ ಮಾತ್ರ ಈ ಘಟನೆಗೂ, ತಮಗೂ ಯಾವುದೇ ಸಂಬಂಧವಿಲ್ಲವೆಂದು ಮೌನಕ್ಕೆ ಶರಣಾಗಿದ್ದಾರೆ.

ಈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗಾಗಲೇ ಬಿಜೆಪಿ ಕಾರ್ಯಕರ್ತ ಅನಿಲ್‌ನನ್ನು ಬಂಧಿಸಿಲಾಗಿದೆ. ಈ ನಡುವೆ ಆಕೆ ಸಾವಿಗೆ ಬಿಜೆಪಿ ಯುವಮೋರ್ಚಾ ನಗರಾಧ್ಯಕ್ಷ ಹಾಗೂ ಹಿಂದೂ ಸಂಘಟನೆಗಳ ನೈತಿಕ ಪೊಲೀಸ್ ಗಿರಿಯೇ ಕಾರಣ ಎನ್ನಲಾಗುತ್ತಿದ್ದು, ತಲೆಮರೆಯಿಸಿಕೊಂಡಿರುವ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ.