ನಮ್ಮ ಒತ್ತಡದಿಂದಲೇ ರಾಜ್ಯ ಸರಕಾರ ಸಾಲ ಮನ್ನಾ ಮಾಡಿದ್ದು: ಎಚ್ಡಿಕೆ
'ರಾಜ್ಯ ಹಾಗೂ ಕೇಂದ್ರ ಸರಕಾರಗಳಿಗೆ ರೈತರ ಸಂಕಷ್ಟಗಳಿಗೆ ಸ್ಪಂದಿಸುವ ಮನಸ್ಸೇ ಇಲ್ಲ. ನಮ್ಮ ಒತ್ತಡಕ್ಕೆ ಮಣಿದು, ರಾಜ್ಯ ಸರಕಾರ ಸ್ವಲ್ಪ ಸಾಲ ಮನ್ನಾ ಮಡಿದೆ,' ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಮಂಡ್ಯ: 'ರಾಜ್ಯ ಹಾಗೂ ಕೇಂದ್ರ ಸರಕಾರಗಳಿಗೆ ರೈತರ ಸಂಕಷ್ಟಗಳಿಗೆ ಸ್ಪಂದಿಸುವ ಮನಸ್ಸೇ ಇಲ್ಲ. ನಮ್ಮ ಒತ್ತಡಕ್ಕೆ ಮಣಿದು, ರಾಜ್ಯ ಸರಕಾರ ಸ್ವಲ್ಪ ಸಾಲ ಮನ್ನಾ ಮಡಿದೆ,' ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಜಿಲ್ಲೆಯ ಹಲಗೂರಿನಲ್ಲಿ ಪ್ರವಾಸ ಕೈಗೊಂಡಿರುವ ಕುಮಾರಸ್ವಾಮಿ, ಪತ್ರಕರ್ತರೊಂದಿಗೆ ಮಾತನಾಡಿ, ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
'ನನ್ನ ಆರೋಗ್ಯ ಈಗಲೂ ಸರಿ ಇಲ್ಲ . ನಾನು ಪುನರ್ಜನ್ಮವೆತ್ತಿ ನಿಮ್ಮ ಮುಂದೆ ಬಂದಿದ್ದೇನೆ. ನನಗೆ ಒಂದೇ ಒಂದು ಅವಕಾಶ ನೀಡಿ, ನಿಮ್ಮ ಋಣ ತೀರಿಸುವೆ'. ಎಂದಿದ್ದಾರೆ.